newsics.com
ಬೆಂಗಳೂರು: ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಹಾಯಧನ ಘೋಷಣೆ ಮಾಡಲಾಗಿದೆ.
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ. 5000 ಸಹಾಯ ಧನ ನೀಡಲು ತೀರ್ಮಾನಿಸಲಾಯಿತು.
ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲೂ ತೀರ್ಮಾನಿಸಲಾಯಿತು.
120 ವರುಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಲಾಯಿತು.
ಮಕ್ಕಳಿಗೆ ನೀಡುತ್ತಿರುವ ವಿದ್ಯಾ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈಗಾಗಲೇ ಮುಕ್ತಾಯವಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಡಿಸೆಂಬರ್ 31 ರವರೆಗೂ ಕಾಲಾವಕಾಶ ನೀಡಿ ಇದರ ಸದುಪಯೋಗ ಪಡೆದುಕೊಳ್ಳಲು ಪ್ರಚಾರ ನೀಡುವಂತೆ ತೀರ್ಮಾನಿಸಲಾಯಿತು.
ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಿಸಲು ತೀರ್ಮಾನಿಸಲಾಯಿತು.
ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅವಧಿ ಮುಗಿದ ನಂತರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು, ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅರ್ಜಿ ಸ್ವೀಕಾರವಾಗದೇ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ಹಾಗೂ ಬೇಲೂರು ಶ್ರೀ ಚನ್ನಕೇಶವ ದೇವಾಲಯದ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು.
ಬಿಯರ್ ಕುಡಿಯುವುದರಿಂದ ಸೌಂದರ್ಯ ಹೆಚ್ಚುತ್ತದೆಯೇ? ಎಷ್ಟರ ಮಟ್ಟಿಗೆ ಸತ್ಯ..?
ಭಿಕ್ಷೆ ಕೊಡಲು ನಿರಾಕರಿಸಿದ ವ್ಯಕ್ತಿಗೆ ಖಾಸಗಿ ಅಂಗ ತೋರಿಸಿದ ಮಂಗಳಮುಖಿ
ತನ್ನ ಗೆಳತಿಯನ್ನು ಕೊಂದು.. ತುಂಡಾಗಿ ಕತ್ತರಿಸಿ.. ಹತ್ತಿ ಹೊಲದಲ್ಲಿ ಹೂತು ಹಾಕಿದ