newsics.com
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯವನ್ನು ಕೀಟಗಳ ದಾಳಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಸೆಂಚೂರಿಯನ್ನಲ್ಲಿ ನಡೆಯುತ್ತಿದೆ.
ಹೌದು, ಭಾರತ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯಕ್ಕೆ ಕೀಟಗಳು ಅಡ್ಡಿಪಡಿಸಿದ್ದರಿಂದ ಪಂದ್ಯವನ್ನು ನಿಲ್ಲಿಸಬೇಕಾಗಿದೆ. ಮೈದಾನದಲ್ಲಿ ಕೀಟಗಳಿದ್ದು, ಇದರಿಂದ ಆಟಗಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಾರುವ ಕೀಟಗಳಿಂದ ಮೊದಲ ಓವರ್ನಲ್ಲೇ ಅರ್ಷದೀಪ್ ಸಿಂಗ್ ಬೌಲಿಂಗ್ ಮಾಡಲು ಕಷ್ಟಪಡಬೇಕಾಯಿತು. ಆದಾಗ್ಯೂ ಎರಡನೇ ಓವರ್ ಆರಂಭವಾಗುವ ಮುನ್ನ ಈ ಕೀಟಗಳು ವಿಪರೀತ ಹೆಚ್ಚಾದ ಕಾರಣ ಅಂಪೈರ್ಗಳು ಆಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ್ದಾರೆ. ಹೀಗಾಗಿ ಆಟಗಾರರೆಲ್ಲರು ಮೈದಾನದಿಂದ ತೆರಳಿದ್ದಾರೆ.
ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆರಂಭದಲ್ಲೇ ಸಂಜು ಸ್ಯಾಮ್ಸನ್ ವಿಕೆಟ್ ಕಳೆದುಕೊಂಡಿತು. ಸ್ಯಾಮ್ಸನ್ ಸತತ ಎರಡನೇ ಪಂದ್ಯದಲ್ಲೂ ಖಾತೆ ತೆರೆಯದೆ ಔಟಾದರು. ಆದಾಗ್ಯೂ, ಅಭಿಷೇಕ್ ಮತ್ತು ತಿಲಕ್ ಇದಾದ ನಂತರ ಇನ್ನಿಂಗ್ಸ್ ಕೈಗೆತ್ತಿಕೊಂಡು ಎರಡನೇ ವಿಕೆಟ್ಗೆ 107 ರನ್ಗಳ ಜೊತೆಯಾಟ ನಡೆಸಿದರು. ಅರ್ಧಶತಕ ಗಳಿಸಿದ ನಂತರ ಅಭಿಷೇಕ್ 25 ಎಸೆತಗಳಲ್ಲಿ 50 ರನ್ ಗಳಿಸಿ ಔಟಾದರು.