newsics.com
ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಸ್ವೀಕಾರ ಮಿತಿ ಮೀರಿದೆ. ಇದನ್ನು ಖಂಡಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯ ಮಾರಾಟಗಾರರ ಒಕ್ಕೂಟ ನ.20ರಂದು ಮದ್ಯ ಬಂದ್ಗೆ ಕರೆ ಕೊಟ್ಟಿದೆ.
ಇನ್ನೂ ನವೆಂಬರ್ 20ರಂದು ಮದ್ಯ ಬಂದ್ಗೆ 10ಕ್ಕೂ ಹೆಚ್ಚು ಮದ್ಯದಂಗಡಿ ವ್ಯಾಪಾರಸ್ಥರು ಬೆಂಬಲ ನೀಡಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ಮದ್ಯ ಸಿಗಲ್ಲ. ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡಿ ಕಾನೂನು ತಿದ್ದುಪಡಿ ಮಾಡುವಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಿದ್ದಾರೆ.
ಈ ಮಧ್ಯೆ ಅಬಕಾರಿ ಇಲಾಖೆಯಲ್ಲಿ ಕೋಟಿ ಕೋಟಿ ಲಂಚ ಸ್ವೀಕಾರ ಎಂದು ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈಗ ಮದ್ಯ ಮಾರಾಟಗಾರರ ಸಂಘ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 20ರಂದು ಮದ್ಯ ಮಾರಾಟ ಬಂದ್ ಮಾಡಲು ನಿರ್ಧರಿಸಿದ್ದಾರೆ. ಅಲ್ಲದೇ, ಅಬಕಾರಿ ಸಚಿವರನ್ನ ಬದಲಾವಣೆ ಮಾಡಬೇಕು. ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ಸಭೆ ಮಾಡಬೇಕು. ಹಣಕಾಸು ಇಲಾಖೆಗೆ ನಮ್ಮ ಇಲಾಖೆಯನ್ನ ಸೇರಿಸಬೇಕು ಎಂದು ಮದ್ಯ ಮಾರಾಟಗಾರರ ಒಕ್ಕೂಟ ಆಗ್ರಹಿಸಿದೆ.