newsics.com
ದೆಹಲಿ: ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೃತದೇಹಗಳನ್ನು ಗುರುತಿಸಿದ ಬಳಿಕ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸದ್ಯ ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರ ಕುಟುಂಬಗಳಿಗೆ ಮಾಹಿತಿ ರವಾನಿಸಲಾಗಿದೆ. ಮಲ್ಲಿಕಾರ್ಜುನ ದೇವಸ್ಥಾನದಿಂದ ಜೀಪ್ ಗೋಕಳೇಶ್ವರಕ್ಕೆ ಹಿಂತಿರುಗುತ್ತಿತ್ತು. ಶೈಲ್ಯಶಿಖರ ಪುರಸಭೆಯ ಬಜನಿ ಎಂಬ ಸ್ಥಳದಲ್ಲಿ ಜೀಪ್ ಆಳವಾದ ಕಂದಕಕ್ಕೆ ಬಿದ್ದಿದೆ. ಜೀಪ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ.
ಇನ್ನು ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಇರಿಸಲಾಗಿದೆ. ಸದ್ಯ ಪೊಲೀಸರು ಘಟನೆ ನಡೆದ ಸ್ಥಳದ ತನಿಖೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.