newsics.com
ಬಿಗ್ ಬಾಸ್ ಸೀಸನ್11ರ ಮೂಲಕ ಕರುನಾಡಿನ ಜನಮನವನ್ನು ಗೆದ್ದ ಲಾಯರ್ ಜಗದೀಶ್ ಮತ್ತೆ ದೊಡ್ಮನೆಗೆ ಕಾಲಿಡುತ್ತಿದ್ದಾರೆ ಎನ್ನಲಾಗುತ್ತಿದೆ.
ಹೌದು. ಬಿಗ್ ಬಾಸ್ ಮನೆಯಲ್ಲಿ ಎರಡು ವಾರಯಷ್ಟೇ ಇದ್ದ ಲಾಯರ್ ಜಗದೀಶ್ ಹೆಣ್ಮಕ್ಕಳ ಬಗ್ಗೆ ಅವಹೇಳನಕಾರಿ ಆಗಿ ಮಾತನಾಡಿದರು ಎನ್ನುವ ಕಾರಣಕ್ಕೆ ಆಚೆ ಬಂದಿದ್ದರು. ಆದರೆ ಅವರು ಬಿಗ್ ಬಾಸ್ ಮನೆಗೆ ಮತ್ತೆ ಬರಬೇಕೆನ್ನುವ ಮಾತುಗಳು ಅವರು ಆಚೆ ಬಂದಾಗಿನಿಂದ ಜೋರಾಗಿ ಕೇಳಿ ಬರುತ್ತಿದೆ.
ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಮೊದಲ ದಿನದಿಂದಲೇ ಲಾಯರ್ ಜಗದೀಶ್ ಒಂದು ಹವಾ ಕ್ರಿಯೇಟ್ ಮಾಡಿದ್ದರು. ಇದರಿಂದಲೇ ಕ್ರಶ್ ಆಫ್ ಕರ್ನಾಟಕ ಪಟ್ಟ ಕೂಡ ಗಿಟ್ಟಿಸಿಕೊಂಡಿದ್ದರು. ಆದರೆ ಇದೀಗ ಮತ್ತೆ ಹಿಂದಿಯ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಡುತ್ತಿದ್ದಾರಂತೆ. ಈ ಬಗ್ಗೆ ಸಾಕಷ್ಟು ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇವೆ. ಆದರೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.