newsics.com
ಬೆಂಗಳೂರು: ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸೇರಿದಂತೆ ಹಲವು ಅವ್ಯವಹಾರಗಳ ಆರೋಪ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೊಂದು ಮುಖಭಂಗ ಎದುರಿಸುವಂತಾಗಿದೆ.
ಬಿಜೆಪಿ ಸರ್ಕಾರದ ವಿರುದ್ಧ ಈ ಹಿಂದೆ, ಅಂದಿನ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳೆಂಬುದು ಲೋಕಾಯುಕ್ತ ತನಿಖೆಯಿಂದ ತಿಳಿದುಬಂದಿದೆ. ಇದು ಸರ್ಕಾರಕ್ಕೆ ನುಂಗಲಾರದ ಬಿಸಿತುಪ್ಪದಂತಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 40 ಪರ್ಸೆಂಟ್ ಕಮಿಷನ್ ಹಣಕ್ಕೆ ಬೇಡಿಕೆ ಇಡಲಾಗಿತ್ತು ಎಂದು ಅಂಬಿಕಾಪತಿ ಅವರು ಆರೋಪ ಮಾಡಿದ್ದರು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಈ ಆರೋಪ ಮಾಡಲಾಗಿತ್ತು.
40 ಪರ್ಸೆಂಟ್ ಕಮಿಷನ್ ಆರೋಪವನ್ನು ರಾಜಕೀಯವಾಗಿ ಪ್ರಬಲ ಅಸ್ತ್ರ ಮಾಡಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದರು. ಇದನ್ನೇ ಪ್ರಮುಖವಾಗಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವಲ್ಲಿ ಕಾಂಗ್ರೆಸ್ ಬಹುತೇಕ ಯಶಸ್ವಿಯಾಗಿತ್ತು.
ಅಚ್ಚರಿಯೆಂದರೆ, ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಿದ್ದಾರೆ. ಅಂಬಿಕಾಪತಿ ಅಂದು ಮಾಡಿದ್ದ ಆರೋಪಗಳು ಆಧಾರರಹಿತ ಎಂಬುದು ಲೋಕಾಯುಕ್ತ ತನಿಖಾ ವರದಿಯಿಂದ ತಿಳಿದುಬಂದಿದೆ ಎಂದು ಮೂಲಗಳು ಹೇಳಿವೆ.
ರೈಲುಗಳಲ್ಲಿ ರೀಲ್ಸ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರೈಲ್ವೆ ಇಲಾಖೆ ನಿರ್ಧಾರ
ಕಿಚ್ಚನ ಖಡಕ್ ಮಾತಿಗೆ ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ; ಮಾತಾಡಲು ಕಷ್ಟಪಟ್ಟ ಫೈರ್ ಬ್ರ್ಯಾಂಡ್!
ಬಿಯರ್ ಕುಡಿಯುವ ಮುನ್ನ ಇದನ್ನೊಮ್ಮೆ ಓದಿಬಿಡಿ, ಬಿಯರ್ನಿಂದ ಅಪಾಯವೂ ಇದೆ…!