newsics.com
ಉಳ್ಳಾಲ (ದಕ್ಷಿಣ ಕನ್ನಡ): ಈಜು ಬಾರದಿದ್ದರೂ ವಿಡಿಯೋ ಹುಚ್ಚಿಗಾಗಿ ರೆಸಾರ್ಟ್ವೊಂದರ ಈಜುಕೊಳಕ್ಕಿಳಿದ ಮುಳುಗಿ ಮೈಸೂರಿನ ಮೂವರು ಯುವತಿಯರು ಮುಳುಗಿ ಮೃತಪಟ್ಟ ಘಟನೆ ಉಳ್ಳಾಲ ಬಳಿ ನಡೆದಿದೆ.
ಉಳ್ಳಾಲದ ಸೋಮೇಶ್ವರದಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದೆ.
ಮೈಸೂರು ದೇವರಾಜ ಮೊಹಲ್ಲಾದ ನವೀನ್ ಕುಮಾರ್ ಅವರ ಪುತ್ರಿ ಕೀರ್ತನಾ ಎನ್ (21), ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ಮಲ್ಲೇಶ್ ಅವರ ಪುತ್ರಿ ನಿಶಿತಾ ಎಂ.ಡಿ (21) ಹಾಗೂ ಮೈಸೂರು ಕೆ.ಆರ್.ಮೊಹಲ್ಲ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಎಂ.ಎನ್ ಶ್ರೀನಿವಾಸ್ ಅವರ ಪುತ್ರಿ ಪಾರ್ವತಿ ಎಸ್ (20) ಮೃತಪಟ್ಟ ಯುವತಿಯರು.
ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿರುವ ರೆಸಾರ್ಟ್ಗೆ ಶನಿವಾರ ಈ ಯುವತಿಯರು ಬಂದಿದ್ದರು. ರೆಸಾರ್ಟ್ ಮುಂಭಾಗದಲ್ಲಿರುವ ಕೊಳಕ್ಕೆ ಭಾನುವಾರ ಬೆಳಗ್ಗೆ 10 ಗಂಟೆಯ ಹೊತ್ತಿಗೆ ನೀರಾಟವಾಡಲು ಇಳಿದಿದ್ದರು. ಈಜುಕೊಳದ ನೀರಿನತ್ತ ಮೊಬೈಲ್ ಪೋನ್ನ ವಿಡಿಯೊ ಕ್ಯಾಮೆರಾ ಆನ್ ಮಾಡಿಟ್ಟು ಯುವತಿಯರು ಈಜಾಡುತ್ತಿದ್ದರು. ಆಳವಿರುವ ಕಡೆ ತೆರಳಿದಾಗ ಈಜು ಬಾರದೆ ಮುಳುಗಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಉಳ್ಳಾಲ ಪೊಲೀಸರು ಹೇಳಿದ್ದಾರೆ.
ಬಿಯರ್ ಕುಡಿಯುವ ಮುನ್ನ ಇದನ್ನೊಮ್ಮೆ ಓದಿಬಿಡಿ, ಬಿಯರ್ನಿಂದ ಅಪಾಯವೂ ಇದೆ…!
ಸಿಕ್ಕ ಸಿಕ್ಕವರನ್ನು ಇರಿದ ವಿದ್ಯಾರ್ಥಿ: ಕನಿಷ್ಟ 8 ಮಂದಿ ಸಾವು, 17 ಜನರಿಗೆ ಗಾಯ
ವಿದ್ಯುತ್ ಟ್ರಾನ್ಸ್ಫಾರ್ಮರ್ ಮೇಲೆ ಯುವತಿಯ ಹುಚ್ಚಾಟ, 800 ಮನೆಗಳಿಗೆ ಪವರ್ ಕಟ್, ವಿಡಿಯೋ ನೋಡಿ