newsics.com
ಬೆಂಗಳೂರು: ಇನ್ಮುಂದೆ ರೈಲ್ವೆ ಪ್ರಯಾಣಿಕರು ಟಿಕೆಟ್ ಗಾಗಿ ಕೌಂಟರ್ ಮುಂದೆ ಸರದಿಯಲ್ಲಿ ನಿಂತು ಕಾಯಬೇಕಲ್ಲ. ಪ್ರಯಾಣಿಕರ ದಟ್ಟಣೆಯ ಸಮಯದಲ್ಲಿ, ಪ್ರಯಾಣಿಕರಿದ್ದ ಜಾಗಕ್ಕೆ ಹೋಗಿ ಟಿಕೆಟ್ ಕೊಡಲು ನೈಋತ್ಯ ರೈಲ್ವೆ ಎಂ-ಯುಟಿಎಸ್ ವ್ಯವಸ್ಥೆ ಪರಿಚಯಿಸಿದೆ.
ಪ್ರಯಾಣಿಕರ ಸಂಕಷ್ಟ ತಪ್ಪಿಸಲು ನೈಋತ್ಯ ರೈಲ್ವೆ ಹೊಸ ಯೋಜನೆ ಶುರು ಮಾಡುತ್ತಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಸರ್.ಎಂ.ವಿಶ್ವೇಶರಯ್ಯ ನಿಲ್ದಾಣ, ಯಶವಂತಪುರ ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಹೊಸ ವ್ಯವಸ್ಥೆ ಜಾರಿಗೆ ಬಂದಿದೆ
ಯಾವೆಲ್ಲ ಟಿಕೆಟ್, ಎಲ್ಲೆಲ್ಲಿ ಸಿಗಲಿದೆ?
ಎಂ-ಯುಟಿಎಸ್ ಯಂತ್ರಗಳ ಮೂಲಕ ಕಾಯ್ದಿರಿಸದ ಟಿಕೆಟ್, ಪ್ಲಾಟ್ಫಾರ್ಮ್ ಟಿಕೆಟ್ಗಳನ್ನು ಪ್ರಯಾಣಿಕರು ನಿಂತಿರುವ ಜಾಗಕ್ಕೆ ಹೋಗಿ ಸಿಬ್ಬಂದಿ ಕೊಡಲಿದ್ದಾರೆ. ನಿಲ್ದಾಣದಿಂದ 500-ಮೀಟರ್ ಅಂತರದಲ್ಲಿ ಎಂ-ಯುಟಿಎಸ್ ಟಿಕೆಟ್ ವಿತರಿಸಲು ಅವಕಾಶವಿದೆ ಎಂದು ನೈಋತ್ಯ ರೈಲ್ವೇ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ತ್ರಿನೇತ್ರ ಕೆ.ಆರ್. ತಿಳಿಸಿದ್ದಾರೆ.
ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ