newsics.com
ಬೆಂಗಳೂರು: ಆದಾಯಕ್ಕಿಂತ ಅತಿ ಹೆಚ್ಚು ಆಸ್ತಿ ಗಳಿಕೆ ಮಾಡಿದ ಹಿನ್ನೆಲೆ ಇಂದು ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ.
ಹೌರು, ಕರ್ನಾಟಕದಾದ್ಯಂತ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ವಿರುದ್ಧ ದೊಡ್ಡ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು, ಮಂಗಳೂರು ಮತ್ತು ಮಂಡ್ಯ ಸೇರಿದಂತೆ ಹಲವೆಡೆ ದಾಳಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಟೌನ್ ಪ್ಲಾನಿಂಗ್ ಮತ್ತು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆದಿದೆ.
ಬೆಳ್ಳಂಬೆಳಗ್ಗೆ ಕರ್ನಾಟಕದ ಸುಮಾರು 25 ಕಡೆ ದಾಳಿ ಮಾಡಿದೆ. ರಾಜ್ಯದ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ 25 ಕಡೆ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿ 25 ಕಡೆಗಳಲ್ಲಿ ದಾಳಿ ಮಾಡಲಾಗಿದೆ.
ಯಾರ ಮೇಲೆ ದಾಳಿ..?
ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ
ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್
ಬೆಂಗಳೂರಿನ ಟೌನ್ ಅಂಡ್ ಫ್ಲಾನಿಂಗ್ ಡೈರೆಕ್ಟರ್ ತಿಪ್ಪೇಸ್ವಾಮಿ
ಬೆಂಗಳೂರಿನ ಅಬಕಾರಿ ಇಲಾಖೆಯ ಎಸ್ಪಿ ಮಹೇಶ್
Weird Kidnapping! ರೋಬೋಟ್ನಿಂದಲೇ ಶೋರೂಂನಿಂದ 12 ದೊಡ್ಡ ರೋಬೋಟ್ಗಳ ಅಪಹರಣ! ವೈರಲ್ ವಿಡಿಯೋ ನೋಡಿ