newsics.com
ತುಮಕೂರು: ತುಮಕೂರು ಜಿಲ್ಲೆಯ ಗೋಪಾಲಪುರ ಗ್ರಾಮದಲ್ಲಿ ನಡೆದಿದ್ದ ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆಯನ್ನು ಸವರ್ಣೀಯರು ಚಪ್ಪಡಿ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದರು. ಈ ಸಂಬಂಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಒಟ್ಟು 27 ಜನರ ಮೇಲೆ ಆರೋಪಿಗಳ ವಿರುದ್ಧ ಕೊಲೆ ಹಾಗೂ ಜಾತಿನಿಂದನೆ ಕೇಸ್ ದಾಖಲಾಗಿತ್ತು.
ಇದೀಗ 14 ವರ್ಷಗಳ ಬಳಿಕ ಒಂದೇ ಗ್ರಾಮದ ಬರೋಬ್ಬರಿ 21 ಆರೋಪಿಗಳಿಗೆ ತುಮಕೂರು 3ನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಹಾಗೂ ತಲಾ ಒಬ್ಬ ಆರೋಪಿಗೆ 13,500 ರೂಪಾಯಿ ದಂಡ ವಿಧಿಸಿದೆ.
27 ಜನ ಆರೋಪಿಗಳ ಪೈಕಿ 6 ಜನ ಮೃತಪಟ್ಟಿದ್ದರಿಂದ 21 ಆರೋಪಿಗಳಿಗೆ ಶಿಕ್ಷೆಯಾಗಿದೆ. 21 ಜನರಲ್ಲಿ ಇಬ್ಬರು ಮಹಿಳೆಯರು, 19 ಜನ ಪುರುಷ ಆರೋಪಿಗಳು.