newsics.com
ಚಿಕ್ಕಮಗಳೂರು : ಕಾಫಿ ತೋಟದಲ್ಲಿ ಕೂಲಿ ಕೆಲಸಕ್ಕಿದ್ದ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಚಿಕ್ಕಮಗಳೂರಿನ ಕೊಳಗಾಮೆ ಸಮೀಪ ನಡೆದಿದೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹರದಗೆರೆ ಗ್ರಾಮದ ಬಸಪ್ಪ(55), ಲಲಿತಮ್ಮ(49) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ದಂಪತಿ ಕಳೆದ 25 ವರ್ಷಗಳಿಂದ ಕೊಳಗಾಮೆ ಸಮೀಪದ ಅನ್ನಪೂರ್ಣೇಶ್ವರಿ ಎಸ್ಟೇಟ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅದೇ ಮನೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಲ್ಲಂದೂರು ಠಾಣೆಗೆ ಎಸ್ಟೇಟ್ ನ ರೈಟರ್ ದೂರು ನೀಡಿದ್ದು, ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.