Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Advocate Arrest ವೀರ ಸೇನಾನಿಗಳ ಅವಹೇಳನ ಆರೋಪ: ವಕೀಲ ವಿದ್ಯಾಧರ್ ಬಂಧನ
ಕರ್ನಾಟಕಪ್ರಮುಖ

Advocate Arrest ವೀರ ಸೇನಾನಿಗಳ ಅವಹೇಳನ ಆರೋಪ: ವಕೀಲ ವಿದ್ಯಾಧರ್ ಬಂಧನ

Share
1 Min Read
SHARE

newsics.com

ಮಡಿಕೇರಿ: ದೇಶ ಕಂಡ ಮಹಾನ್ ಸೇನಾಧಿಕಾರಿಗಳ ವಿರುದ್ಧ ಪೋಸ್ಟ್ ಹಾಕಿದ ಆರೋಪದಡಿ ಮಡಿಕೇರಿಯ ವಕೀಲರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಮಡಿಕೇರಿಯ ವಕೀಲ ಕೆ.ಆರ್.ವಿದ್ಯಾಧರ್ ಅವರನ್ನು ಸುಂಟಿಕೊಪ್ಪ ಪೊಲೀಸರು ತಡರಾತ್ರಿ ಬಂಧಿಸಿ ಮಡಿಕೇರಿಯ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರಿಂದ ಆಕ್ಷೇಪ ಪತ್ರ ಪಡೆದು ಆರೋಪಿಗೆ ಷರತ್ತುಬದ್ಧ ಜಾಮೀನನ್ನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರಾತ್ರಿಯೇ ಅವರು ಬಿಡುಗಡೆಗೊಂಡಿದ್ದಾರೆ.

ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯರನ್ನು ಅವಹೇಳನಕಾರಿಯಾಗಿ ಬಿಂಬಿಸಿ ಶ್ರೀವತ್ಸ ಭಟ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಶುಕ್ರವಾರ ಪೋಸ್ಟ್ ಮಾಡಲಾಗಿತ್ತು.

ಇದರ ವಿರುದ್ಧ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಜನಪ್ರತಿನಿಧಿಗಳು, ಸಂಘಸಂಸ್ಥೆಗಳು ಹಾಗೂ ಜಿಲ್ಲಾ ಬಿಜೆಪಿ ಪ್ರಮುಖರು ಪೊಲೀಸ್ ವರಿಷ್ಠಾಧಿಕಾರಿಯವರನ್ನು ಒತ್ತಾಯಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದರು. ಈ ತಂಡ ತನಿಖೆ ನಡೆಸಿ ಶುಕ್ರವಾರ ತಡರಾತ್ರಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.

Copper Age Group Institute ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ

Bigg Boss Kannada ನಂಗೂ ಹೊಟ್ಟೆ ಉರಿಯಲ್ವಾ?: ರಜತ್ ಹೀಗ್ಯಾಕೆ ಹೇಳಿದ್ರು..?

TAGGED:Accused of insulting brave soldiers: Lawyer Vidyadhar arrested
Share This Article
Facebook Twitter Copy Link Print
Previous Article Election Result ಮೂರೂ‌ ಕಡೆ ಕೈ ಮೇಲುಗೈ, ಚನ್ನಪಟ್ಟಣದಲ್ಲಿ ನಿಖಿಲ್‌ಗೆ ಭಾರೀ ಹಿನ್ನಡೆ
Next Article Election Result ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ತುಕಾರಾಂ ಗೆಲುವು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?