newsics.com
ರಾಮನಗರ: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ಗೆದ್ದು ಬೀಗಿದ್ದಾರೆ. ಹೌದು, ಮೊದಲ 6 ಸುತ್ತಿನಲ್ಲಿ ನಿಖಿಲ್ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ ಓಪನ್ ಆಗುತ್ತಿದ್ದಂತೆ ಯೋಗೇಶ್ವರ್ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.
ಯೋಗೇಶ್ವರ್ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಎರಡು ಬಾರಿ ಶಾಸಕರಾಗಿ ಕುಮಾರಸ್ವಾಮಿ ಕ್ಷೇತ್ರಕ್ಕೆ ಬರಲಿಲ್ಲ ಎಂಬ ಬೇಸರ ಇತ್ತು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಟೆಯಾಗಿ ತಗೆದುಕೊಂಡಿದ್ದರು.
ಚುನಾವಣೆಗೆ 4 ತಿಂಗಳು ಮೊದಲೇ ಡಿಸಿಎಂ ಡಿಕೆ ಶಿವಕುಮಾರ್ ಜನತಾ ದರ್ಶನ ಆರಂಭಿಸಿದ್ದರು. ಕಳೆದ ಬಾರಿ ಯೋಗೇಶ್ವರ್ಗೆ ಮಿಸ್ ಆಗಿದ್ದ ಅಲ್ಪ ಸಂಖ್ಯಾತ ಮತಗಳು ಈ ಬಾರಿ ದೊಡ್ಡ ಮಟ್ಟದಲ್ಲಿ ಕಾಂಗ್ರೆಸ್ ಕೈ ಹಿಡಿದಿದೆ.