newsics.com
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರಿಂದ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ.
ಹೌದು, ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸಿಪಿ ಚಂದನ್ ಕುಮಾರ್ ಅವರು, FSL ವರದಿಗಳು ಹಾಗೂ ರಿಟ್ರಿವ್ ಮಾಡಿದ ಭಾವಚಿತ್ರಗಳು ಸೇರಿದಂತೆ ಒಟ್ಟು 1,300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಅನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೋಬ್ಬರಿ 1,300 ಪುಟಗಳ ಅಡಿಷನಲ್ ಚಾರ್ಜ್ ಶೀಟ್ ಇದೀಗ ಸಲ್ಲಿಕೆಯಾಗಿದೆ. FSL ರಿಪೋರ್ಟ್, ಕೆಲ ಪ್ರಮುಖ ಸಾಕ್ಷಿಗಳ ಹೇಳಿಕೆಗಳು ಹಾಗೂ ಪುನೀತ್ ಮೊಬೈಲ್ ನಿಂದ ರಿಟ್ರಿವ್ ಮಾಡಲಾದ 8 ಫೋಟೋ ಸೇರಿದಂತೆ ಮಹತ್ವದ ಅಂಶಗಳನ್ನು ಒಳಗೊಂಡಿರುವ ಹೆಚ್ಚುವರಿ ಚಾರ್ಜ್ ಶೀಟ್ ಇದೀಗ ACP ಚಂದನ್ ಕುಮಾರ್ ಕೋರ್ಟಿಗೆ ಸಲ್ಲಿಕೆ ಮಾಡಿದ್ದಾರೆ.
ಸದ್ಯ ಜಾಮೀನಿನ ಮೇಲೆ ಹೊರಗಿರುವ ದರ್ಶನ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯನ್ನು ಅವರ ಪರ ವಕೀಲರು ಈಗಾಗಲೇ ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಈ ಮಧ್ಯೆ ಹೈಕೋರ್ಟ್ ಮಂಜೂರು ಮಾಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿದ್ದಾರೆ.