Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Honeytrap for a Techie ಅಣ್ಣ, ತಂಗಿ ಸೇರಿ ಟೆಕ್ಕಿಗೆ ಹನಿಟ್ರ್ಯಾಪ್ ಬಲೆ, ಎರಡೂವರೆ ಕೋಟಿ ರೂ. ವಸೂಲಿ, ಮೂವರ ಸೆರೆ
ಕರ್ನಾಟಕಪ್ರಮುಖ

Honeytrap for a Techie ಅಣ್ಣ, ತಂಗಿ ಸೇರಿ ಟೆಕ್ಕಿಗೆ ಹನಿಟ್ರ್ಯಾಪ್ ಬಲೆ, ಎರಡೂವರೆ ಕೋಟಿ ರೂ. ವಸೂಲಿ, ಮೂವರ ಸೆರೆ

Share
2 Min Read
SHARE

newsics.com

ಬೆಂಗಳೂರು: ಜಿಮ್‌ನಲ್ಲಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸಾಫ್ಟ್‌ವೇರ್ ಉದ್ಯೋಗಿಗೆ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳಿವೆ ಎಂದು ಬೆದರಿಸಿ ಎರಡೂವರೆ ಕೋಟಿ ರುಪಾಯಿ ಸುಲಿಗೆ ಮಾಡಿದ್ದ ಅಣ್ಣ-ತಂಗಿ ಸೇರಿದಂತೆ ಮೂವರನ್ನು ಸಿಸಿಬಿ ಬಂಧಿಸಿದೆ.

ಉಡುಪಿ ಜಿಲ್ಲೆಯ ತಬಸಂ ಬೇಗಂ, ಆಕೆಯ ಸೋದರ ಅಜೀಂ ಉದ್ದೀನ್‌ ಹಾಗೂ ಅಭಿಷೇಕ್ ಅಲಿಯಾಸ್ ಅವಿನಾಶ್ ಬಂಧಿತರಾಗಿದ್ದು, ಆರೋಪಿಗಳಿಂದ ಮೊಬೈಲ್‌ಗಳು ಹಾಗೂ ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಲಾಗಿದೆ.

ನಾಲ್ಕು ವರ್ಷಗಳ ಹಿಂದೆ ಆರ್‌.ಟಿ.ನಗರದಲ್ಲಿರುವ ತಬಸಂನ ಅಣ್ಣ ಅಜೀಂ ಒಡೆತನದ ಜಿಮ್‌ಗೆ ಟೆಕ್ಕಿ ತೆರಳುತ್ತಿದ್ದ. ಆ ವೇಳೆ ಫಿಟ್ನೆಸ್‌ ಮಾರ್ಗದರ್ಶಿಯಾಗಿದ್ದ ಆಕೆ, ಸಂತ್ರಸ್ತ ಟೆಕ್ಕಿ ಜತೆ ಸಲುಗೆ ಬೆಳೆಸಿಕೊಂಡು ಹನಿಟ್ರ್ಯಾಪ್ ಬಲೆಗೆ ಬೀಳಿಸಿಕೊಂಡಿದ್ದಳು. ಕೊನೆಗೆ ಬ್ಲ್ಯಾಕ್‌ಮೇಲ್‌ ಕಿರುಕುಳ ಸಹಿಸಲಾರದೆ ಪೊಲೀಸ್ ಆಯುಕ್ತರಿಗೆ ಸಂತ್ರಸ್ತ ನೀಡಿದ ದೂರು ಆಧರಿಸಿ ಸಿಸಿಬಿ ತನಿಖೆ ಕೈಗೆತ್ತಿಕೊಂಡಿತ್ತು. ದೂರು ದಾಖಲಾದ ಕೂಡಲೇ ನಗರ ತೊರೆದು ಉಡುಪಿ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೂರುದಾರ ಸಾಫ್ಟ್‌ವೇರ್ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದು, ತಮ್ಮ ಕುಟುಂಬದ ಜತೆ ಆರ್‌.ಟಿ.ನಗರ ಸಮೀಪ ಆತ ನೆಲೆಸಿದ್ದಾನೆ. ಹಲವು ವರ್ಷಗಳಿಂದ ಆರ್.ಟಿ.ನಗರದಲ್ಲಿ ‘ಗ್ರೂಪ್ ಎಕ್ಸ್ ಫಿಟ್ನೆಸ್‌’ ಹೆಸರಿನ ಜಿಮ್‌ ಅನ್ನು ಅಜೀಂ ನಡೆಸುತ್ತಿದ್ದು, ಈ ಜಿಮ್‌ನಲ್ಲಿ ಆತನ ತಂಗಿ ತಬಸಂ ಫಿಟ್ನೆಸ್ ಕೋಚ್ ಆಗಿದ್ದಳು. ಆಗ ತನಗೆ ಮದುವೆಯಾಗಿ ಮಕ್ಕಳಿರುವ ಸಂಗತಿ ಮುಚ್ಚಿಟ್ಟು ತಮ್ಮ ಜಿಮ್‌ಗೆ ಬರುತ್ತಿದ್ದ ಟೆಕ್ಕಿ ಸ್ನೇಹ ಮಾಡಿ ಸಲುಗೆ ಬೆಳೆಸಿಕೊಂಡಿದ್ದಳು. ಅಲ್ಲದೆ ಪ್ರೀತಿ ನಾಟಕವಾಡಿ ದೂರುದಾರರ ಕುಟುಂಬದವರು ಇಲ್ಲದ ಹೊತ್ತಿನಲ್ಲಿ ಆತನ ಮನೆಗೆ ತೆರಳಿ ತಬಸಂ ಖಾಸಗಿ ಕ್ಷಣ ಕಳೆದಿದ್ದಳು. ಆ ವೇಳೆ ತನ್ನ ಮೊಬೈಲ್‌ನಲ್ಲಿ ರಹಸ್ಯವಾಗಿ ಏಕಾಂತದ ಸಮಯದ ದೃಶ್ಯಾವಳಿಗಳನ್ನು ಆಕೆ ಚಿತ್ರೀಕರಿಸಿಕೊಂಡಿದ್ದಳು.

ಈ ವಿಡಿಯೋ ಹಾಗೂ ಫೋಟೋ ಮುಂದಿಟ್ಟು ಆಕೆ ಸುಲಿಗೆ ಆರಂಭಿಸಿದ್ದಳು. ತನಗೆ ಹಣ ಕೊಡದೆ ಹೋದರೆ ಇವುಗಳನ್ನು ಮೀಡಿಯಾ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿ ನಿನ್ನ ಮಾರ್ಯದೆ ತೆಗೆಯುವುದಾಗಿ ಬೆದರಿಕೆ ಹಾಕಿದ್ದಳು. ತನಗೆ ಮನೆಯಲ್ಲಿ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದು, ಇದಕ್ಕಾಗಿ ಮಗುವೊಂದನ್ನು ದತ್ತು ತೆಗೆದುಕೊಂಡಿದ್ದೀನಿ ಎಂದು ಆಕೆ ಹೇಳಿದ್ದಳು. ಈ ಮಾತು ನಂಬಿದ ಸಂತ್ರಸ್ತ, ಆಕೆಯ ಮಗನ ಶಿಕ್ಷಣಕ್ಕೆ ನೆರವಾಗಿದ್ದ. ಅಲ್ಲದೆ ಪೊಲೀಸ್ ಮತ್ತು ಲಾಯರ್ ಎಂದು ಹೇಳಿಕೊಂಡು ತನ್ನ ಸಹಚರ ಅಭಿಷೇಕ್ ಮೂಲಕ ಸಂತ್ರಸ್ತನಿಗೆ ಕರೆ ಮಾಡಿ ಬೆದರಿಸಿದ್ದಳು.

ಆಕೆಯ ಸೋದರ, ತನ್ನ ತಂಗಿಯನ್ನು ಮದುವೆಯಾಗು. ಇಲ್ಲದಿದ್ದರೆ ಆರು ಲಕ್ಷ ರೂಪಾಯಿ ನೀಡುವಂತೆ ತಾಕೀತು ಮಾಡಿದ್ದ. ಹೀಗೆ ಬೆದರಿಸಿ ಹಂತ ಹಂತವಾಗಿ ಎರಡೂವರೆ ಕೋಟಿ ರೂ.ಗಳನ್ನು ಆರೋಪಿಗಳು ವಸೂಲಿ ಮಾಡಿದ್ದರು. ಇದರಿಂದ ಬೇಸತ್ತು ಪೊಲೀಸರಿಗೆ ಸಂತ್ರಸ್ತ ದೂರು ನೀಡಿದ್ದ.

Camara misuse ಜಿಮ್ ಕಾರ್ಬೆಟ್ ಉದ್ಯಾನದ ಕ್ಯಾಮರಾಗಳಲ್ಲಿ ಮಹಿಳೆಯರ ಖಾಸಗಿ ಕ್ಷಣ ಸೆರೆ! ಕಿರುಕುಳ,‌ ಬೆದರಿಕೆಗೆ‌ ಬಳಕೆ

Saregamapa Show: ಹೊಸ ಥ್ರಿಲ್‌ನೊಂದಿಗೆ ಮತ್ತೆ ಬರ್ತಿದೆ ಸರಿಗಮಪ ಹೊಸ ಸೀಸನ್

Dowry Case ಅಣ್ಣ ನನಗೆ ಬದುಕಲು ಇಷ್ಟವಿಲ್ಲ: ನೇಣಿಗೆ ಕೊರಳೊಡ್ಡಿದ 6 ತಿಂಗಳ ಗರ್ಭಿಣಿ 

TAGGED:arrest of threeBrother and sister together set up a honeytrap for a techietwo and a half crores of rupees. Recovery
Share This Article
Facebook Twitter Copy Link Print
Previous Article Camara misuse ಜಿಮ್ ಕಾರ್ಬೆಟ್ ಉದ್ಯಾನದ ಕ್ಯಾಮರಾಗಳಲ್ಲಿ ಮಹಿಳೆಯರ ಖಾಸಗಿ ಕ್ಷಣ ಸೆರೆ! ಕಿರುಕುಳ,‌ ಬೆದರಿಕೆಗೆ‌ ಬಳಕೆ
Next Article ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ನವಮಿ 24-11-2024, ಭಾನುವಾರ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?