newsics.com
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ವಿವಾದ, ಮತಾಂತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಮಠಗಳ ಮಠಾಧೀಶರ ನಿಯೋಗದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ವಿವಿ ಪುರಂನ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಮಾರ್ಗದರ್ಶಕ ಮಂಡಳಿ ಸಮಾವೇಶದಲ್ಲಿ ಮತಾಂತರ, ವಕ್ಫ್ ವಿವಾದ, ಮಠ ಮಂದಿರಗಳ ಆಸ್ತಿ ರಕ್ಷಣೆಗೆ ಸಂಬಂಧಿಸಿದಂತೆ ಕೈಗೊಂಡ ನಿರ್ಣಯಗಳ ಸಂಬಂಧ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಮಠಾಧೀಶರು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಅಧ್ಯಕ್ಷ ಡಾ. ಅಲೋಕ್ ಕುಮಾರ್, ಪೇಜಾವರ ಮಠದ ಪೀಠಾಧ್ಯಕ್ಷ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಹೊಸಕೋಟೆ ಚಿಂತಾಮಣಿ ಮಠದ ಶಿವಾನಂದ ಭಾರತಿ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಉಪಸ್ಥಿತರಿದ್ದರು