newsics.com
ಬೆಂಗಳೂರು : ವಾಯುಭಾರ ಕುಸಿತದ ಈ ಎಫೆಕ್ಟ್ ಕೇವಲ ಚೆನ್ನೈಗೆ ಮಾತ್ರವಲ್ಲ ಬೆಂಗಳೂರಿಗೆ ತಟ್ಟಿದೆ. ಇಂದು ಸಂಜೆ ಬೆಂಗಳೂರು ನಗರದ ಕೆಲವೆಡೆ ಮಳೆಯಾಗಿದ್ದು, ನಾಳೆ ಕೂಡ ಸಾಧಾರಣ ಮಳೆ ಬೀಳುವ ನಿರೀಕ್ಷೆ ಹೊಂದಲಾಗಿದೆ.
ಇಂದು ಬೆಳಗ್ಗೆಯಿಂದಲೂ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಆವರಿಸಿತ್ತು. ಈ ಬಗ್ಗೆ ಹವಾಮಾನ ತಜ್ಞ ಸಿ.ಎಸ್ ಪಾಟೀಲ್ ಅವರು ನ್ಯೂಸ್ ಫಸ್ಟ್ಗೆ ಮಾಹಿತಿ ನೀಡಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.
ನಾಳೆ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ- ಮೈಸೂರು, ಚಾಮರಾಜನಗರ, ಕೊಡಗಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.