newsics.com
ಚೆನ್ನೈ: ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಚೆನ್ನೈ ಸಮೀಪದ ಚೆಂಗಲ್ಪಟ್ಟು ಜಿಲ್ಲೆಯ ತಿರುಪೋರೂರು ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಮಹಿಳೆಯರು ತಮ್ಮ ಜಾನುವಾರುಗಳನ್ನು ಸಮೀಪದ ಹೊಲಗಳಿಗೆ ಮೇಯಲು ಬಿಟ್ಟು ರಸ್ತೆ ಬದಿಯಲ್ಲಿ ಕುಳಿತಿದ್ದಾಗ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆದಿದೆ.
ಮೃತರನ್ನು ಎಂ ಆಂಧಾಯಿ(71), ಸಿ ಲೋಗಮ್ಮಳ್(56), ಜಿ ಯಶೋಧ(54), ಎಸ್ ವಿಜಯ(53), ಕೆ ಗೌರಿ(52) ಎಂದು ಗುರುತಿಸಲಾಗಿದೆ.
ನಾಲ್ವರು ಕಾಲೇಜು ವಿದ್ಯಾರ್ಥಿಗಳು ಕಾರಿನಲ್ಲಿದ್ದರು. ಕಾರು ಚಾಲನೆ ಮಾಡುತ್ತಿದ್ದ ಯುವಕ ಸೇರಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸ್ಥಳದಿಂದ ಪರಾರಿಯಾಗಿರುವ ಇತರ ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ.