newsics.com
ಬೆಂಗಳೂರು: ನಗರದಲ್ಲಿ ಪ್ರಿಯಕರನಿಂದ ಪ್ರಿಯತಮೆಯನ್ನು ಬರ್ಬರ ಹತ್ಯೆ ಮಾಡಿ ಹೊರ ರಾಜ್ಯವೆಲ್ಲಾ ಸುತ್ತಾಡುತ್ತಿದ್ದ ಆರೋಪಿ ಕೊನೆಗೆ ದೇವನಹಳ್ಳಿ ಬಳಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಕೇರಳ ಮೂಲದ ಆರವ್ ಹನೋವ್(21) ಬಂಧಿತ ಕೊಲೆ ಆರೋಪಿ. ಅಸ್ಸಾಂ ಮೂಲದ ಪ್ರಿಯತಮೆ ಮಾಯಾ ಗೊಗೊಯ್ಳನ್ನು ಕೊಲೆಗೈದಿದ್ದ. ಬಳಿಕ ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿದ್ದ. ಎರಡು ತಂಡಗಳನ್ನು ರಚಿಸಿ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ.
ಇಂದಿರಾನಗರದ ಸರ್ವಿಸ್ ಅಪಾರ್ಟ್ಮೆಂಟ್ಗೆ ನವೆಂಬರ್ 23ರಂದು ಸರ್ವಿಸ್ ಅಪಾರ್ಟ್ಮೆಂಟ್ಗೆ ಒಟ್ಟಿಗೆ ಬಂದಿದ್ದರು. ನಂತರ ಆರವ್ ಹನೋವ್ ಮಾಯಾ ಗೊಗೊಯ್ಳನ್ನು ಕೊಲೆಗೈದಿದ್ದಾರೆ. ಬಳಿಕ ಒಂದು ದಿನ ಮೃತದೇಹದ ಜತೆಗೆ ಕಾಲ ಕಳೆದಿದ್ದು, ನ.26ರ ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಘಟನಾ ಸ್ಥಳದಿಂದ ಎಸ್ಕೇಪ್ ಆಗಿದ್ದ. ಸ್ಥಳಕ್ಕೆ ಭೇಟಿ ನೀಡಿದ ಇಂದಿರಾನಗರ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.
ಆರೋಪಿ ಇಲ್ಲಿಂದ ರೈಲ್ವೆ ಸ್ಟೇಷನ್ ಮೂಲಕ ಉತ್ತರ ಪ್ರದೇಶ, ವಾರಾಣಸಿ ಸೇರಿ ಹಲವು ಕಡೆ ಸುತ್ತಾಡಿದ್ದಾನೆ. ಕೊನೆಗೆ ದೇವನಹಳ್ಳಿ ಬಳಿ ಬಂದಿದ್ದಾನೆ. ಮಾಹಿತಿ ಪಡೆದು ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.
Pavagada Goverment School | ಬಿಸಿಯೂಟದ ಚಿಕ್ಕಿ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ
Shani Amavasye | ನಾಳೆ ಪರಿವರ್ತನ ಯೋಗ: ಈ ರಾಶಿಗಳ ಜನರಿಗೆ ಅದೃಷ್ಟದ ದಿನ