newsics.com
ಹುಬ್ಬಳ್ಳಿ: ಹಿರಿಯ ಸಾಹಿತಿ ಡಾ ಸಂಗಮೇಶ ಹಂಡಿಗಿ ಸ್ಮರಣೆಯ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದಿಂದ ನೀಡುವ ‘ಸಂಗಮ ಸಿರಿ’ ಮೂರನೇ ರಾಜ್ಯ ಪ್ರಶಸ್ತಿ ಈ ಬಾರಿ ಕಾವ್ಯ ಕ್ಷೇತ್ರದಲ್ಲಿನ ಸಾಧಕರಿಗೆ ನೀಡಲಾಗುತ್ತಿದ್ದು, ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶಿವರ ಗ್ರಾಮದ ಡಾ. ಎಸ್ .ಕೆ. ಮಂಜುನಾಥ ಅವರಿಗೆ ಸಂದಿದೆ.
‘ಗಾಳಿಯ ಎದೆ ಸೀಳಿ ಹೊರಟ ಹಕ್ಕಿ’ ಎಂಬ ಕೃತಿಗೆ ಪ್ರಶಸ್ತಿ ನೀಡಲಾಗಿದೆ.ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದ್ದು, ಡಿ.8ರಂದು ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಜಿ.ಬಿ.ಗೌಡಪ್ಪಗೊಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ ತಿಳಿಸಿದ್ದಾರೆ.
ಕವಿ ಮಹಾಂತಪ್ಪ ನಂದೂರ ಅವರ ನೇತೃತ್ವದ ಸಾಹಿತ್ಯ ಸಮಿತಿ ಈ ಆಯ್ಕೆಯನ್ನು ಮಾಡಿದೆ ಎಂದು ಕಾರ್ಯಕ್ರಮ ಸಂಯೋಜಕ ಡಾ.ಪ್ರಭು ಗಂಜಿಹಾಳ ತಿಳಿಸಿದ್ದಾರೆ.
ಸಂಗಮ ಸಿರಿ ಮೊದಲ ಎರಡು ಪ್ರಶಸ್ತಿಯನ್ನು ವಚನ ಸಾಹಿತ್ಯ ಕ್ಷೇತ್ರದಲ್ಲಿ ಡಾ.ವೀರಣ್ಣ ದಂಡೆ ದಂಪತಿ ಹಾಗೂ ಸಿದ್ದನಗೌಡ ಬಿಜ್ಜೂರ ಅವರಿಗೆ ನೀಡಲಾಗಿತ್ತು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
chikkamagaluru ಜೀವಂತವಾಗಿರುವಾಗಲೇ ಮರಣ ಪ್ರಮಾಣಪತ್ರ ಸೃಷ್ಟಿಸಿ ಆಸ್ತಿ ಹಂಚಿಕೊಂಡ ಮೊಮ್ಮಕ್ಕಳು!
ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದೈತ್ಯ ಅಲೆಗೆ ಬಲಿ! Video viral
ಮಾಜಿ ಬಾಯ್ಪ್ರೆಂಡ್ ಹತ್ಯೆಗೈದ ಆರೋಪದಡಿ ಬಾಲಿವುಡ್ ನಟಿ ನರ್ಗಿಸ್ ಫಾಕ್ರಿ ಸಹೋದರಿಯ ಬಂಧನ