newsics.com
ಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ (ಡಿ.5) ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.
ಸುಮಯ್ಯ ಎನ್ನುವ ಬಾಣಂತಿ ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ 10 ರಂದು ಏಳು ಬಾಣಂತಿಯರ ಹೆರಿಗೆಯಾಗಿತ್ತು. ಇದರಲ್ಲಿ ನಾಲ್ವರು ಈಗಾಗಲೇ ಮೃತಪಟ್ಟಿದ್ದು, ಇದೀಗ ಮತ್ತೋರ್ವ ಬಾಣಂತಿ ಸುಮಯ್ಯ ಸಾವನ್ನಪ್ಪಿದ್ದಾರೆ.
ಈ ಮೂಲಕ ಒಂದೇ ದಿನ ಹೆರಿಗೆಯಾದವರ 7 ಬಾಣಂತಿಯರ ಪೈಕಿ ಐವರು ಮೃತಪಟ್ಟಂತಾಗಿದ್ದು, ಇನ್ನುಳಿದ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ.
ಸಮಸ್ಯೆಯಿಂದ ಬಳಲುತ್ತಿದ್ದ ಸುಮಯ್ಯ ಅವರಿಗೆ ನಿತ್ಯ ಡಯಾಲಿಸಿಸ್ ಮಾಡಲಾಗುತ್ತಿತ್ತು. ಗುರುವಾರ ತೀವ್ರವಾದ ತೊಂದರೆಯಾದ ಹಿನ್ನಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸುಮಯ್ಯ ಕೊನೆಯುಸಿರೆಳೆದಿದ್ದಾರೆ.
ಬಾಣಂತಿಯರಿಗೆ ನೀಡಿದ್ದ ಗ್ಲೂಕೋಸ್ನಿಂದಲೇ ಅವರು ಸಾವು ಕಂಡಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಸಾವು ಕಂಡ ನಾಲ್ವರು ಬಾಣಂತಿಯರಿಗೆ ನೀಡಲಾಗಿದ್ದ ಕಳಪೆ ಐವಿ ದ್ರಾವಣವೇ ಕಾರಣ ಎನ್ನಲಾಗಿದೆ.
ಇದರ ಬೆನ್ನಲ್ಲಿಯೇ ಆಸ್ಪತ್ರೆಯಲ್ಲಿ ಐವಿ ಫ್ಲ್ಯೂಡ್ಸ್ ನೀಡುವುದನ್ನು ಸ್ಥಗಿತ ಮಾಡಲಾಗಿತ್ತು. ತನಿಖಾ ವರದಿಯಲ್ಲಿ ಕಳಪೆ ದ್ರಾವಣ ಬಗ್ಗೆ ಉಲ್ಲೇಖವಾಗಿದೆ. ಕಳಪೆ ಗ್ಲೂಕೋಸ್ನಿಂದ ಬಾಣಂತಿಯರ ಸಾವಾಗಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ.
ಐವಿ ಫ್ಲ್ಯೂಡ್ಸ್ಗಳನ್ನು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (KSMSCL) ಸರಬರಾಜು ಮಾಡಿತ್ತು. ನಾಲ್ವರು ಬಾಣಂತಿಯರಿಗೆ ಸಾವಿಗೆ ಕೆಎಸ್ಎಂಎಸ್ ಸಿಎಲ್ ನೀಡಿದ್ದ ಈ ಔಷಧ ಕಾರಣವೇ ಎನ್ನುವ ಶಂಕೆ ಮೂಡಿದೆ.
KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,ಕೇರಳ ಲಾಬಿ ಶಂಕೆ
Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ
Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್