newsics.com
ವಿಜಯಪುರ: ಕಾರಿಗೆ ಕಬ್ಬು ಕಟಾವು ಮಷಿನ್ ಡಿಕ್ಕಿಯಾದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಕಾರಿನದ್ದಿವರ ದೇಹಗಳು ಛಿದ್ರವಾಗಿ ಬೇರ್ಪಟ್ಟಿದೆ.
ಹುಣಸಗಿಯಿಂದ ತಾಳಿಕೋಟೆಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.