newsics.com
ಹಾಸನ: ವರ್ಕ್ ಫ್ರಂ ಹೋಮ್(WH)ನಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯ ಉದ್ಯೋಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ಇಂಜಿನಿಯರ್ನನ್ನು ಸಮರ್ಥ್ (26) ಎಂದು ಗುರುತಿಸಲಾಗಿದೆ. ಗ್ರಾಮದ ಕಾಫಿ ಬೆಳೆಗಾರರಾದ ಹೇಮಂತ್ ಹಾಗೂ ಸರಳ ಎಂಬುವರ ಪುತ್ರ ಸಮರ್ಥ್ ಚಿಕ್ಕಂದಿನಿಂದಲೂ ಉತ್ತಮ ಅಂಕ ಗಳಿಸುತ್ತಾ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದರು. ಓದು ಮುಗಿದ ನಂತರ ಸಮರ್ಥ್ ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು.
ಮದುವೆ ವಯಸ್ಸಿಗೆ ಬಂದಿದ್ದ ಮಗನಿಗೆ ರಾತ್ರಿ ಪಾಳಿಯ ಕೆಲಸ ಇದ್ದುದರಿಂದ ನೀನು ಮನೆಗೆ ಬಂದು ಇಲ್ಲಿಂದಲೇ ಕೆಲಸ ಮಾಡಬಹುದಾ ಎಂದು ಮನೆಯಲ್ಲಿ ತಂದೆ ತಾಯಿ ಕೇಳಿದ್ದಾರೆ. ಈ ಬಗ್ಗೆ ಕಚೇರಿಯಲ್ಲಿ ವರ್ಕ್ ಫ್ರಂ ಹೋಮ್ ಕೇಳಿಕೊಂದು ಕೆಲವು ದಿನಗಳ ಹಿಂದೆ ಮನೆಗೆ ಹೋಗಿದ್ದಾರೆ. ಕಳೆದ ಕೆಲವು ತಿಂಗಳಿಂದ ಮನೆಯಲ್ಲಿ ರಾತ್ರಿಯಿಂದ ಬೆಳಗಾಗುವವರೆಗೂ ಕೆಲಸ ಮಾಡುತ್ತಿದ್ದ ಸಮರ್ಥ್ ಬೆಳಗಿನ ಜಾವ ಎಲ್ಲರೂ ಎದ್ದು ದೈನಿಕ ಕೆಲಸ ಶುರು ಮಾಡುವ ವೇಳೆಗೆ ಮಲಗುತ್ತಿದ್ದರು. ನಂತರ, ಸಂಜೆ ವೇಳೆ ಎದ್ದು ಒಂದಷ್ಟು ದಿನಚರಿ ಮುಗಿಸಿದ ನಂತರ ಪುನಃ ಕೆಲಸ ಆರಂಭಿಸುತ್ತಿದ್ದರು.
ಶನಿವಾರ ರಾತ್ರಿಯ ಕೆಲಸ ಮುಗಿಸಿದ ಸಮರ್ಥ್ ಎಂದಿನಂತೆ ಬೆಳಗ್ಗೆ ತಿಂಡಿ ತಿಂದು ಮಲಗಿ ಸಂಜೆ ಎದ್ದಿದ್ದಾನೆ. ಸಂಜೆ ಹಾಸಿಗೆಯಿಂದ ಎದ್ದು ನೀರು ಕುಡಿದಿದ್ದಾನೆ. ತಕ್ಷಣವೇ ತಾನಿದ್ದ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ನಿದ್ದೆ ಇಲ್ಲದೇ ಅಸ್ವಸ್ಥಗೊಂಡಿರಬಹುದು ಎಂದು ಮನೆಯವರು ಕೂಡಲೇ ಆಸ್ಪತ್ರೆಗೆ ಕರೆ ಮಾಡಿ ವೈದ್ಯರನ್ನು ಮನೆಗೆ ಕರೆಸಿಕೊಂಡಿದ್ದಾರೆ. ವೈದ್ಯರು ಬಂದು ತಪಾಸಣೆ ಮಾಡಿದಾಗ ಸಮರ್ಥ ಕೊನೆಯುಸಿರೆಳೆದಿದ್ದರು.
ನಿಮ್ಮ ಮೊಬೈಲ್ನಲ್ಲಿ ಸರಿಯಾಗಿ ಸಿಗ್ನಲ್ ಸಿಗುತ್ತಿಲ್ಲವೇ..? ಈ ರೀತಿ ಮಾಡಿ
Relationship Tips: ಜೀವನ ಪರ್ಯಂತ ಮೊದಲ ರಾತ್ರಿ ನೆನಪಿನಲ್ಲಿ ಉಳಿಯಬೇಕಾ? ಈ ಕೆಲಸಗಳನ್ನ ಮಾಡಿ