newsics.com
ಕನ್ನಡದ ವರನಟ ಡಾ. ರಾಜ್ಕುಮಾರ್ ಅವರು ಬಂಧನಕ್ಕೆ ಒಳಗಾದಾಗ ಎಸ್ಎಂ ಕೃಷ್ಣ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರು ಕಾಡಲ್ಲಿ ಇದ್ದಷ್ಟೂ ದಿನ ಸರಿಯಾಗಿ ನಿದ್ದೆ ಮಾಡದೆ ಕೃಷ್ಣ ಅವರು ಒದ್ದಾಡಿದ್ದರು.
ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದು ದೊಡ್ಡ ಸುದ್ದಿ ಆಗಿತ್ತು. ಖ್ಯಾತನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದಿತ್ತು. ಅವರು ಮರಳದಿದ್ದರೆ ಮುಂದೇನು ಎನ್ನುವ ಭಯ ಎಸ್ಎಂ ಕೃಷ್ಣ ಅವರನ್ನು ಬಹುವಾಗಿ ಕಾಡಿತ್ತು. 108 ದಿನ ಅವರು ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದರು. ರಾಜ್ಕುಮಾರ್ ಮರಳಿದ ಬಳಿಕ ಕೃಷ್ಣ ನಿಟ್ಟುಸಿರು ಬಿಟ್ಟಿದ್ದರು.
ರಾಜ್ಕುಮಾರ್ ಅವರ ಅಭಿಮಾನಿ ಬಳಗ ಬಹಳ ದೊಡ್ಡದು. ಕೃಷ್ಣ ಅವರು ಕೂಡ ಅಣ್ಣಾವ್ರ ಅಭಿಮಾನಿಯೇ. ಅವರಿಗೆ ಏನಾದರೂ ಆದರೆ ಅಭಿಮಾನಿಗಳು ಸುಮ್ಮನೆ ಇರುವುದಿಲ್ಲ ಎಂಬುದು ಕೃಷ್ಣ ಅವರಿಗೆ ಸ್ಪಷ್ಟವಾಗಿ ತಿಳಿದಿತ್ತು. ಬೆಂಗಳೂರಲ್ಲಿ ತಮಿಳಿಗರ ಸಂಖ್ಯೆ ಕೂಡ ದೊಡ್ಡದಿದೆ. ರಾಜ್ಕುಮಾರ್ಗೆ ಹಾನಿಯಾದರೆ ಬೆಂಗಳೂರಲ್ಲಿ ಕನ್ನಡಿಗರು ಹಾಗೂ ತಮಿಳಿಗರ ಮಧ್ಯೆ ಗಲಭೆ ಉಂಟಾಗುವ ಭಯ ಕೃಷ್ಣ ಅವರನ್ನು ಕಾಡಿತ್ತು.
ರಾಜ್ಕುಮಾರ್ ಸುಮಾರು 108 ದಿನ ಕಾಡಿನಲ್ಲಿದ್ದರು. ಅಪಹರಣಕ್ಕೆ ಒಳಗಾದ ವಿಚಾರವನ್ನು ಪಾರ್ವತಮ್ಮ ಅವರು ಕೃಷ್ಣಗೆ ಹೇಳಿದ್ದರು. ಆ ಸಂದರ್ಭದಲ್ಲಿ ಪಾರ್ವತಮ್ಮ ಮೈಸೂರಿನಲ್ಲಿ ಇದ್ದರು. ನಂತರ ಪಾರ್ವತಮ್ಮ ಅವರು ಬೆಂಗಳೂರಿಗೆ ಬಂದು ಮಾಹಿತಿ ನೀಡಿದ್ದರು. ನಂತರ ನಿರಂತರ ಪ್ರಯತ್ನದಿಂದ ಅವರನ್ನು ಕರೆದುಕೊಂಡು ಬರಲಾಯಿತು. ಆ ಬಳಿಕ ರಾಜ್ಯದಲ್ಲಿ ಸಂಭ್ರಮ ಮನೆ ಮಾಡಿತ್ತು. ರಾಜ್ಕುಮಾರ್ ಅವರನ್ನು ಕರೆತರಲು ಕೃಷ್ಣ ಅವರು ಸಾಕಷ್ಟು ಶ್ರಮ ಹಾಕಿದ್ದರು.
S M Krishna ಬೆಂಗಳೂರಲ್ಲಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಇಂದು, ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ