newsics.com
ಬೆಂಗಳೂರು: ಸುಂಗಧರಾಜ ಹೂವಿನ ಬೆಳೆಯ ನಡುವೆ ರೈತರೊಬ್ಬರು ದೃಷ್ಟಿ ಬೊಂಬೆ ಬದಲಿಗೆ ನಟಿ ಶ್ರೀಲೀಲಾ ಫೋಟೋ ಬಳಸಿರುವ ಘಟನೆ ಬೆಂಗಳೂರಿನ ಹೊಸಹಳ್ಳಿ ಬಳಿ ನಡೆದಿದೆ
ಹೌದು, ಸುಗಂಧರಾಜ ಹೂವಿನ ತೋಟದ ಮಧ್ಯೆ ನಟಿ ಶ್ರೀಲೀಲಾ ಫೋಟೋ ಹಾಕಲಾಗಿದ್ದು ದಾರಿ ಹೋಕರ ಕಣ್ಣು ಕುಕ್ಕುತ್ತಿದೆ.
ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಟಿಯರ ಭಾವಚಿತ್ರಗಳನ್ನ ದೃಷ್ಟಿ ಬೊಂಬೆಯಾಗಿ ಬಳಸುತ್ತಿದ್ದು, ಸಿನಿಮಾ ನಟಿಯರ ಫ್ಲೆಕ್ಸ್ಗಳನ್ನ ಬೆಳೆಗಳ ನಡುವೆ ನೇತುಹಾಕುತ್ತಿದ್ದಾರೆ. ರಸ್ತೆಯಲ್ಲಿ ಹೋಗುವವರು ಬೆಳೆ ಹೇಗಿದೆ ಎಂದು ನೋಡುವುದಕ್ಕೂ ಮುನ್ನವೇ ಥಟ್ಟನೆ ಕಣ್ಣಿಗೆ ಬಿಳುತ್ತಿರುವುದೇ ಈ ಸಿನಿಮಾ ತಾರೆಯರ ಫ್ಲೆಕ್ಸ್ಗಳು. ಹೀಗಾಗಿ ಬೆಳೆಗೆ ದೃಷ್ಟಿ ಆಗಲ್ಲ ಅನ್ನೋ ನಂಬಿಕೆ ರೈತರದ್ದಾಗಿದೆ.