newsics.com
ಬೆಂಗಳೂರು : ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು (ಡಿಸೆಂಬರ್ 12) ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್ನನ್ನು ಬಂಂಧಿಸಿದ್ದಾರೆ.
ನಿರ್ಜನ ಪ್ರದರ್ಶನದಲ್ಲಿದ್ದ ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ ದೊಡ್ಡ ಮಟ್ಟದಲ್ಲಿ ಬ್ಲಾಸ್ಟ್ ಆಗಿದೆ, ಬೆಂಕಿ ಸಹ ಚಿಮ್ಮಿದೆ. ಅಷ್ಟೇ ಅಲ್ಲದೇ ಬಾಂಬ್ ಬ್ಲಾಸ್ಟ್ ರೀತಿ ದೃಶ್ಯ ಕಂಡುಬಂದಿದೆ. ಈ ಸಂಬಂಧಮಿಡಿಗೇಶಿ ಪೊಲೀಸರು BNS ಸೆಕ್ಷನ್ 288, ಸ್ಫೋಟವಸ್ತು ನಿಯಂತ್ರಣ ಕಾಯ್ದೆ 3ರಅಡಿ ಪ್ರಕರಣ ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದಾರೆ.