newsics.com
ಉಡುಪಿ: ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತ ಅವರು ಗುರುವಾರ ನಿಧನರಾದರು.
ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್ ( RRC) ನ ನಿವೃತ್ತ ಉದ್ಯೋಗಿಯಾಗಿದ್ದ ಕೃಷ್ಣ ಅವರು ಅದ್ಭುತ ಹಾಡುಗಾರರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಇವರ ಹಾಡಿನ ಕ್ಯಾಸೆಟ್ ಗಳು ಬಹಳ ಜನಪ್ರಿಯವಾಗಿವೆ. ರಂಗಭೂಮಿ ಉಡುಪಿಯ ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೆ, ಹಿನ್ನೆಲೆ ಹಾಡುಗಾರರಾಗಿ ಬಹಳಷ್ಟು ನಾಟಕಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸಾಂಸ್ಕೃತಿಕ ರಂಗಕ್ಕೆ ನೀಡಿರುವ ಕೊಡುಗೆಗಾಗಿ ಇವರನ್ನು ಇತ್ತೀಚೆಗೆ ರಂಗಭೂಮಿ ಉಡುಪಿ ಸಂಸ್ಥೆಯು ಗೌರವಿಸಿ ಸನ್ಮಾನಿಸಿತ್ತು.
ರಂಗಭೂಮಿಯ ಎಲ್ಲಾ ಕಾರ್ಯಕ್ರಮಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಿದ್ದ ಕೃಷ್ಣ ಅವರ ಅಗಲುವಿಕೆ ಸಂಗೀತ ಹಾಗೂ ನಾಟಕ ರಂಗಕ್ಕೆ ಅಪಾರ ನಷ್ಟವಾಗಿದೆ.
ವಿದೇಶದಲ್ಲಿರುವ ಬಿ. ಕೆ. ಕಾರಂತರ ಮಗ ಬಂದ ನಂತರ, ಮೃತರ ಅಂತಿಮ ದರ್ಶನ ಹಾಗೂ ಅಂತಿಮ ವಿಧಿವಿಧಾನವು ಶುಕ್ರವಾರ (ಡಿ. 13) ಸಂಜೆ ನಡೆಯಲಿದೆ ಎಂದು ಅವರ ಬಂಧುಗಳು ತಿಳಿಸಿದ್ದಾರೆ.
Kannada judgment ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ
JSW Energy Plant JSW ಎನರ್ಜಿ ಪ್ಲಾಂಟ್ ನಿಂದ ವಿಷಕಾರಿ ಹೊಗೆ ಆವರಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
Health tips : ಚಳಿಗಾಲದಲ್ಲಿ ಐಸ್ ಕ್ರೀಮ್ ತಿಂದರೆ ಏನಾಗುತ್ತದೆ ಗೊತ್ತಾ?