newsics.com
ಉತ್ತರ ಪ್ರದೇಶ: ಬಹ್ರೈಚ್ನ ಮಿಹಿನ್ಪುರವದಲ್ಲಿರುವ ನವಯುಗ್ ಇಂಟರ್ ಕಾಲೇಜಿನಲ್ಲಿ ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಮೂವರು ಕಾಲೇಜು ವಿದ್ಯಾರ್ಥಿಗಳು ತಮ್ಮ ತರಗತಿಯ ಶಿಕ್ಷಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಈ ದಾಳಿಯಲ್ಲಿ ಶಿಕ್ಷಕನಿಗೆ ಗಂಭೀರವಾಗಿ ಗಾಯವಾಗಿದ್ದು, ಈ ಭೀಕರ ಘಟನೆ ತರಗತಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮೂವರು ವಿದ್ಯಾರ್ಥಿಗಳು ಪ್ಲಾನ್ ಮಾಡಿ ಶಿಕ್ಷಕರಿಗೆ ಚಾಕುವಿನಿಂದ ಇರಿದಿರುವುದು ವಿಡಿಯೋದಲ್ಲಿ ಕಂಡು ಬರುತ್ತಿದೆ. ಇರಿತಕ್ಕೊಳಗಾದ ಶಿಕ್ಷಕನನ್ನು ರಾಜೇಂದ್ರ ಪ್ರಸಾದ್ ವರ್ಮಾ ಎಂದು ಗುರುತಿಸಲಾಗಿದೆ. ಅವರು ಪಿಯುಸಿಯ ಇಂಗ್ಲಿಷ್ ಶಿಕ್ಷಕ ಮತ್ತು ತರಗತಿ ಶಿಕ್ಷಕರಾಗಿದ್ದಾರೆ.