newsics.com
ಬೆಂಗಳೂರು : ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಭಾರತದಲ್ಲಿ ಮತ್ತೆ ವರುಣನ ಆರ್ಭಟ ಕಂಡು ಬರುವ ಮಹತ್ವದ ಮುನ್ಸೂಚನೆ ನೀಡಿದೆ. ಈ ಬಾರಿ ಮತ್ತೆ ಮುಂದಿನ 5 ದಿನಗಳ ಮಳೆಯ ಎಚ್ಚರಿಕೆಯನ್ನು ನೀಡಿಲಾಗಿದೆ.
IMD (ಭಾರತೀಯ ಹವಾಮಾನ ಇಲಾಖೆ) ನೀಡಿರುವ ಮಾಹಿತಿ ಪ್ರಕಾರ ಇದೇ ಡಿಸೆಂಬರ್ 17 ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 19ರಿಂದ ಕರಾವಳಿ, ಮಲೆನಾಡು & ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯು ಪುನಶ್ಚೇತನಗೊಳ್ಳುವ ಸಾಧ್ಯತೆಯಿದೆ.
ಡಿಸೆಂಬರ್ 17ರಿಂದ ತಮಿಳುನಾಡು, ಪುದುಚೇರಿಯಲ್ಲಿ ಮಳೆಯ ಆರ್ಭಟ ಜೋರಾಗಿರಲಿದೆ. ಆಂಧ್ರಪ್ರದೇಶ ಕಡಲತೀರದ ಪ್ರದೇಶ, ರಾಯಲ್ ಸೀಮಾ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ, ಬೆಂಗಳೂರು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.