newsics.com
ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತಿ ಮತ್ತೋರ್ವ ವ್ಯಕಿ ಸಾವಿಗೆ ಶರಣಾಗಿರುವ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ಸಿಲುವೆಪುರದಲ್ಲಿ ಪತ್ನಿ ಕಿರುಕುಳ, ಅಕ್ರಮ ಸಂಬಂಧಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಾಲರಾಜ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. 18 ವರ್ಷಗಳ ಹಿಂದೆ ಕುಮಾರಿ ಎಂಬುವವರನ್ನು ಬಾಲರಾಜ್ ಎರಡನೇ ವಿವಾಹವಾಗಿದ್ದ. ಪತಿ ಪತ್ನಿ ನಡುವಿನ ಜಗಳದಲ್ಲಿ ಪತ್ನಿ ತವರು ಮನೆ ಸೇರಿದ್ದಳು. ಇತ್ತ ಯಾರೂ ಇಲ್ಲದ ವೇಳೆ ಮನೆಯ ಫ್ಯಾನ್ ಗೆ ನೇಣುಬಿಗಿದುಕೊಂಡು ಬಾಲರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.