newsics.com
ಉತ್ತರ ಕನ್ನಡ : ಪರಿಸರ ಪ್ರೇಮಿ ಎಂದೇ ಖ್ಯಾತರಾಗಿರುವ ಕನ್ನಡ ನಾಡಿನ ತುಳಸಿ ಗೌಡ ಅವರು ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ’ ಇಂದು ವಿಧಿವಶರಾಗಿದ್ದಾರೆ .
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ. 30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವ ಅವರ ಕೆಲಸವನ್ನು ಕೊಂಡಾಡಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ಮನೆಯಲ್ಲಿ ತೀರಾ ಬಡತನವಿದ್ದೂ ಕುಟುಂಬಕ್ಕಾಗಿ ಕೂಲಿ ಕೆಲಸವನ್ನು ಮಾಡುತ್ತಲೇ ಹಸಿರು ಕ್ರಾಂತಿ ಮಾಡಿದ್ದ ಪರಿಸರ ಪ್ರೇಮಿ ತುಳಸಿಗೌಡ ಅವರ ಪರಿಸರ ಪ್ರೇಮವನ್ನು ಮೆಚ್ಚಿ ಭಾರತ ಸರ್ಕಾದರದಿಂದ ಕೊಡಮಾಡುವ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.