Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Supreme court ಮಸೀದಿಯೊಳಗೆ ಜೈ ಶ್ರೀರಾಂ ಕೂಗೋದು ಕ್ರಿಮಿನಲ್ ಅಪರಾಧವಾ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ಕರ್ನಾಟಕದೇಶಪ್ರಮುಖ

Supreme court ಮಸೀದಿಯೊಳಗೆ ಜೈ ಶ್ರೀರಾಂ ಕೂಗೋದು ಕ್ರಿಮಿನಲ್ ಅಪರಾಧವಾ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

Share
2 Min Read
SHARE

newsics.com

ನವದೆಹಲಿ: ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೂಗುವುದು ಕ್ರಿಮಿನಲ್ ಅಪರಾಧ ಹೇಗೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಪೊಲೀಸರನ್ನು ಪ್ರಶ್ನಿಸಿದೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಎಂದು ಕೂಗಿದ ಆರೋಪದ ಮೇಲೆ ಇಬ್ಬರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಕೂಗುವುದು ಹೇಗೆ ಅಪರಾಧ? ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈದರ್ ಅಲಿ ಸಿ ಎಂ ಅವರು ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಿದ್ದಾರೆ.

ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಯೊಳಗೆ ಬಂದು ಘೋಷಣೆ ಕೂಗಿದ ವ್ಯಕ್ತಿಗಳನ್ನು ಹೇಗೆ ಗುರುತಿಸಲಾಯಿತು ಎಂದು ದೂರುದಾರರನ್ನು ಪ್ರಶ್ನಿಸಿದೆ.

ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೆ ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್‌ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಪ್ರಶ್ನಿಸಿತು.

ಅಂತಿಮವಾಗಿ ದೂರುದಾರರು ಸಲ್ಲಿಸಿದ ಮೇಲ್ಮನವಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ನೀಡುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು 2025ರ ಜನವರಿಯಲ್ಲಿ ನಡೆಸುವುದಾಗಿ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ- ಮರ್ದಾಳ ರಸ್ತೆಯಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿ ಆವರಣಕ್ಕೆ ನುಗ್ಗಿದ್ದ ಕೀರ್ತನ್ ಕುಮಾರ್ ಮತ್ತು ಸಚಿನ್ ಕುಮಾರ್ ʼಜೈ ಶ್ರೀ ರಾಮ್ʼ ಎಂದು ಕೂಗಿದ್ದರು ಹಾಗೂ ಬ್ಯಾರಿಗಳನ್ನು (ಮುಸ್ಲಿಮರು) ಶಾಂತಿಯಿಂದ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂಬುದಾಗಿ ಆರೋಪಿಸಲಾಗಿತ್ತು.

ಐಪಿಸಿ ಸೆಕ್ಷನ್‌ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು), 447 (ಅತಿಕ್ರಮಣ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಆರೋಪಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ತಮ್ಮ ವಿರುದ್ಧದ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಬಳಿಕ ಅವರಿಬ್ಬರೂ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ನಿರ್ದಿಷ್ಟ ಧಾರ್ಮಿಕ ನುಡಿಗಟ್ಟು ಅಥವಾ ಹೆಸರನ್ನು ಕೂಗುತ್ತಿದ್ದರು. ಅದು ಹೇಗೆ ಅಪರಾಧ? ಮಸೀದಿ ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದು ಹೇಗೆ? ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೆ ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ನ್ಯಾಯಪೀಠ ದೂರುದಾರರ ಪರ ವಕೀಲರನ್ನು ಪ್ರಶ್ನಿಸಿತು.

Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ

Priyanka Gandhi: ಸಂಸತ್‌ಗೆ ಪ್ಯಾಲೆಸ್ತೀನ್ ಬ್ಯಾಗ್‌ ಹಾಕಿಕೊಂಡು ಬಂದ ಪ್ರಿಯಾಂಕಾ ಗಾಂಧಿ

Crime ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

TAGGED:Is it a criminal offense to shout Jai Shri Ram inside a mosque? Supreme Court Question to Karnataka Police
Share This Article
Facebook Twitter Copy Link Print
Previous Article |Tulasi Gowda Passes away ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ
Next Article hardik pandya: ಅಮೆರಿಕನ್ ಮಾಡೆಲ್ ಕೈಲಿ ಜೆನ್ನರ್ ಜತೆ ಹಾರ್ದಿಕ್ ಪಾಂಡ್ಯ ಸೆಕೆಂಡ್ ಮ್ಯಾರೇಜ್

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?