newsics.com
ಜಾರ್ಜಿಯಾ: ಜಾರ್ಜಿಯಾದ ಗುಡೌರಿ ಪರ್ವತದ ರೆಸಾರ್ಟ್ನಲ್ಲಿರುವ ರೆಸ್ಟೋರೆಂಟ್ನಲ್ಲಿ 12 ಭಾರತೀಯ ಪ್ರಜೆಗಳು ಶವವಾಗಿ ಪತ್ತೆಯಾಗಿದ್ದಾರೆ.
ಕಾರ್ಬನ್ ಮಾನಾಕ್ಸೈಡ್ ವಿಷಾನಿಲದಿಂದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿದೆ.
ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಗಾಯಗಳು ಅಥವಾ ಹಿಂಸಾಚಾರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಾರ್ಜಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಮೃತಪಟ್ಟ ಎಲ್ಲ 12 ಮಂದಿಯೂ ಭಾರತೀಯ ನಾಗರಿಕರು ಎಂದು ಟಿಬಿಲಿಸಿಯಲ್ಲಿರುವ ಭಾರತೀಯ ಹೈಕಮಿಷನರ್ ಹೇಳಿದೆ. ಮೃತರ ಶವಗಳು ರೆಸ್ಟೋರೆಂಟ್ನ ಎರಡನೇ ಮಹಡಿಯಲ್ಲಿರುವ ಮಲಗುವ ಕೋಣೆಗಳಲ್ಲಿ ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.
ಜಾರ್ಜಿಯಾದ ಗುಡೌರಿಯಲ್ಲಿ 12 ಭಾರತೀಯ ಪ್ರಜೆಗಳ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಭಾರತೀಯ ಹೈಕಮಿಷನರ್ ಕೂಡ ಹೇಳಿಕೆಯಲ್ಲಿ ತಿಳಿಸಿದೆ.
ಪೊಲೀಸರು ಜಾರ್ಜಿಯಾದ ಕ್ರಿಮಿನಲ್ ಕೋಡ್ನ ಆರ್ಟಿಕಲ್ 116ರ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದು ಇದು ನಿರ್ಲಕ್ಷ್ಯದಿಂದ ಆದ ಕೊಲೆ ಎಂದು ಉಲ್ಲೇಖಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮಲಗುವ ಕೋಣೆ ಬಳಿ ಮುಚ್ಚಿದ ಜಾಗದಲ್ಲಿ ವಿದ್ಯುತ್ ಜನರೇಟರ್ ಅನ್ನು ಇರಿಸಲಾಗಿತ್ತು. ಶುಕ್ರವಾರ ರಾತ್ರಿ ವಿದ್ಯುತ್ ಸರಬರಾಜು ಸ್ಥಗಿತಗೊಂಡ ನಂತರ ಅದನ್ನು ಆನ್ ಮಾಡಲಾಗಿದೆ. ‘ಸಾವಿಗೆ ನಿಖರವಾದ ಕಾರಣ’ವನ್ನು ನಿರ್ಧರಿಸಲು ಫೋರೆನ್ಸಿಕ್ ವೈದ್ಯಕೀಯ ಪರೀಕ್ಷೆಯನ್ನು ಸಹ ನೇಮಿಸಲಾಗಿದೆ.
https://x.com/ANI/status/1868666352833364199?t=Kh7MZSRsNS6oefrr7T_ORA&s=19
hardik pandya: ಅಮೆರಿಕನ್ ಮಾಡೆಲ್ ಕೈಲಿ ಜೆನ್ನರ್ ಜತೆ ಹಾರ್ದಿಕ್ ಪಾಂಡ್ಯ ಸೆಕೆಂಡ್ ಮ್ಯಾರೇಜ್