newsics.com
ಶಬರಿಮಲೆ: ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಕರ್ನಾಟಕದ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಅಯ್ಯಪ್ಪ ಸ್ವಾಮಿಯ ಭಕ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಅಲ್ಲಿದ್ದವರು ಕೂಡಲೇ ಅಯ್ಯಪ್ಪ ಸ್ವಾಮಿಯ ಭಕ್ತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಪ್ರಯೋಜನಕಾರಿಯಾಗದೆ ಕೊನೆಯುಸಿರೆಳೆದರು.
ಕರ್ನಾಟಕದ ಕನಕಪುರ ನಿವಾಸಿ ಕುಮಾರಸ್ವಾಮಿ (40) ಆತ್ಮಹತ್ಯೆ ಮಾಡಿಕೊಂಡವರು. ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಕುಮಾರಸ್ವಾಮಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
https://twitter.com/i/status/1868708831712498037
Tirupati Thimmappa ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ! ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿ
Ustad Zakir Memory ಡಮರುಗವಾದ ತಬಲಾ… ಉಸ್ತಾದ್ ಝಾಕಿರ್ ಕೈಬೆರಳುಗಳ ಚಮತ್ಕಾರ ನೋಡಿ, ಅವರ ಅದ್ಭುತ ಮಾತನ್ನೂ ಕೇಳಿ!
12 people died ರೆಸ್ಟೋರೆಂಟ್ನಲ್ಲಿ 12 ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?