newsics.com
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ್, ಪವಿತ್ರ ಗೌಡ, ನಾಗರಾಜು, ಅನು ಕುಮಾರ್, ಎಂ ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೋಷ್ ರಾವ್ ಗೆ ಹೈಕೋರ್ಟ್ ಜಾಮೀನು ನೀಡಿದೆ.
ಹೈಕೋರ್ಟ್ ನಿಂದ ಜಾಮೀನು ಪ್ರತಿ ಸಿಕ್ಕಿದ್ದು ಕೂಡಲೇ ಜೈಲಿನ ಮುಖ್ಯ ಅಧಿಕಾರಿಗಳಿಗೆ ತಲುಪಿಸಗಿದೆ. ಈ ಹಿನ್ನೆಲೆಯಲ್ಲಿ ಇಂದು ಜೈಲಿಂದ ಅವರು ರಿಲೀಸ್ ಆಗಿದ್ದು, ಆರ್.ಆರ್ ನಗರದ ಮನೆಗೆ ಪವಿತ್ರಾಗೌಡ ತೆರಳಿದ್ದಾರೆ.
ಜೂನ್ 11 ರಂದು ಪವಿತ್ರಾಗೌಡ ಅವರನ್ನು ಬಂಧಿಸಲಾಗಿತ್ತು. ಬರೊಬ್ಬರಿ ಆರು ತಿಂಗಳ ಬಳಿಕ ಪವಿತ್ರಾ ಗೌಡ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪವಿತ್ರಾ ಗೌಡ ಎ-1 ಹಾಗೂ ದರ್ಶನ್ ಎ-2 ಆರೋಪಿಯಾಗಿದ್ದರು. ಸತತವಾಗಿ ಕೋರ್ಟ್ ನಲ್ಲಿ ವಾದ ಮಂಡಿಸಿದ ಪವಿತ್ರಾ ಗೌಡ ಪರ ವಕೀಲರು ಕೊನೆಗೂ ಜಾಮೀನು ಮಂಜೂರು ಮಾಡುವಲ್ಲಿ ಸಫಲವಾಗಿದ್ದಾರೆ. ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಕೋರ್ಟ್ ಜಾಮೀನು ನೀಡಿದೆ. ನಟ ದರ್ಶನ್ ಸದ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.