newsics.com
ಉತ್ತರ ಕನ್ನಡ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪರಿಸರ ಪ್ರೇಮಿ ತುಳಸಿಗೌಡ ಅವರ ಅಂತ್ಯಕ್ರಿಯೆಯನ್ನು ಇಂದು ಅವರ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ಇನ್ನು ವಯೋಸಹಜ ಕಾಯಿಲೆಗಳಿಂದ ನಿನ್ನೆ ನಿಧನರಾಗಿರುವ ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಪ್ರಧಾನಿ ಮೋದಿ ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ”ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ತುಳಸಿಗೌಡ ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.