Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ: ಅಮಿತ್ ಶಾಗೆ ಪತ್ರ ಬರೆದ CM ಸಿದ್ದರಾಮಯ್ಯ
ಕರ್ನಾಟಕಪ್ರಮುಖ

ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ: ಅಮಿತ್ ಶಾಗೆ ಪತ್ರ ಬರೆದ CM ಸಿದ್ದರಾಮಯ್ಯ

Share
3 Min Read
SHARE

newsics.com

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ ಸಿಎಂ ಸಿದ್ದರಾಮಯ್ಯ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಸಂಸತ್ ನಲ್ಲಿ ಇಂದು ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್ ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು ಎಂದಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಸಿಎಂ, ಸನ್ಮಾನ್ಯ ಅಮಿತ್ ಶಾ ಅವರೇ, ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ್ಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ್ಮ ಮಾತಿನಿಂದ ಇಡೀ ದೇಶಕ್ಕೆ ನಿಮ್ಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್ ನಲ್ಲಿ ನಿಂತು ಅವರ ಸ್ಮರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ್ಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು.. ಅಮಿತ್ ಶಹಾ ಅವರೇ, ”ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ” ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತ್ಮವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ. ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು
ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ ಎಂದಿದ್ದಾರೆ.
ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು.. ನಮ್ಮ ಪಕ್ಷದ ಹಿರಿಯ ನಾಯಕರಾದ ಸನ್ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ಈ ವಾಸ್ತವ ಸದಾ ನಮ್ಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ. ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ್ಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ.
ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮ್ಮಂತಹವರಿಗೆ ನಿಮ್ಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ್ಮ ಮಾತೃಸಂಸ್ಥೆಯಾದ ಆರ್ ಎಸ್ ಎಸ್ ಯಾಕೆ ತಿರಸ್ಕರಿಸಿತ್ತು? ಆರ್ ಎಸ್ ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ. ನಿಮ್ಮ ಸುಳ್ಳುಗಳು ಮತ್ತು ಆತ್ಮವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು, ಆದರೆ ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ. ನಿಮ್ಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ್ಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿ…ಮೋದಿ.. ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸ್ಮರಣೆ ಮಾಡಿದ್ದರೆ ಏಳು ಜನ್ಮದಲ್ಲಿ ಮಾತ್ರ ಅಲ್ಲ, ನೂರು ಜನ್ಮದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು ಎಂದಿದ್ದಾರೆ.

https://x.com/siddaramaiah/status/1869258304016523480?ref_src=twsrc%5Etfw%7Ctwcamp%5Etweetembed%7Ctwterm%5E1869258304016523480%7Ctwgr%5Ec9a97df8642a710673cd337c23e0801175982273%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Ambedkar is not an addiction for usan eternal memory: CM Siddaramaiah writes to Amit Shah
Share This Article
Facebook Twitter Copy Link Print
Previous Article Immoral relationship ಅನೈತಿಕ ಸಂಬಂಧ ಬಹಿರಂಗ: ಭಯದಿಂದ ವಿವಾಹಿತರಿಬ್ಬರು ಆತ್ಮಹ*ತ್ಯೆ
Next Article Success: ಜೀವನದಲ್ಲಿ ಯಶಸ್ಸು ಸಿಗಬೇಕಾ? ತಪ್ಪದೇ ಈ ರೀತಿ ಮಾಡಿ

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?