Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Elderly couple divorced ಮದುವೆಯಾಗಿ 43 ವರ್ಷಗಳ ಬಳಿಕ‌ ವಿಚ್ಛೇದನ ಪಡೆದ ವೃದ್ಧ ದಂಪತಿ, ಅಜ್ಜಿಗೆ 3.7 ಕೋಟಿ ಪರಿಹಾರ ನೀಡಲು ಒಪ್ಪಿದ ಅಜ್ಜ!
ದೇಶಪ್ರಮುಖ

Elderly couple divorced ಮದುವೆಯಾಗಿ 43 ವರ್ಷಗಳ ಬಳಿಕ‌ ವಿಚ್ಛೇದನ ಪಡೆದ ವೃದ್ಧ ದಂಪತಿ, ಅಜ್ಜಿಗೆ 3.7 ಕೋಟಿ ಪರಿಹಾರ ನೀಡಲು ಒಪ್ಪಿದ ಅಜ್ಜ!

Share
2 Min Read
SHARE

newsics.com

ಪಂಚಕುಲ (ಹರಿಯಾಣ): ಮದುವೆಯಾಗಿ ಬರೋಬ್ಬರಿ 43 ವರ್ಷಗಳ ಬಳಿಕ ವೃದ್ಧ ದಂಪತಿ ವಿಚ್ಛೇದನ ಪಡೆದಿರೋದು ಮತ್ತು ಇದಕ್ಕಾಗಿ ವೃದ್ಧ ತನ್ನ ಜಮೀನನ್ನು ಮಾರಿರುವ ವಿಚಿತ್ರ ಪ್ರಕರಣ ಹರಿಯಾಣದಲ್ಲಿ ನಡೆದಿದೆ.

ಪಂಚಕುಲದಲ್ಲಿರುವ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳ ಹೈಕೋರ್ಟ್ನಲ್ಲಿ ವೃದ್ಧ ದಂಪತಿ ವಿಚ್ಛೇದನ ಪಡೆದಿದ್ದು, ವೃದ್ಧೆಗೆ ವಿಚ್ಛೇದನ ಬಳಿಕ ಜೀವನಾಂಶ ಮೊತ್ತವಾಗಿ 3.7 ಕೋಟಿ ರೂಪಾಯಿ ನೀಡಲು ವೃದ್ಧ ಒಪ್ಪಿದ್ದಾರೆ.

ಹರಿಯಾಣದ ಕರ್ನಾಲ್ ಜಿಲ್ಲೆಯ ವೃದ್ಧ ದಂಪತಿ ವಿವಾಹವಾದ 43 ವರ್ಷಗಳ ಬಳಿಕ ವಿಚ್ಛೇದನ ಪಡೆದಿದೆ. ಪತ್ನಿಗೆ 3.7 ಕೋಟಿ ಶಾಶ್ವತ ಜೀವನಾಂಶ ನೀಡಲು ವೃದ್ಧ ಪತಿ ಒಪ್ಪಿಗೆ ನೀಡಿದ್ದಾರೆ.

ಹೈಕೋರ್ಟ್ ಮಧ್ಯಸ್ಥಿಕೆ ಮೂಲಕ ನಡೆದ ಈ ಒಪ್ಪಂದದಲ್ಲಿ ಪತಿ ತನ್ನ ಕೃಷಿ ಭೂಮಿ ಮತ್ತು ಬೆಳೆಗಳನ್ನು ಮಾರಾಟ ಮಾಡುವ ಒಪ್ಪಂದದ ಷರತ್ತುಗಳನ್ನು ಪೂರೈಸಿದರು.

ಮೂಲಗಳ ಪ್ರಕಾರ, 69 ವರ್ಷದ ಪತಿ, 73 ವರ್ಷದ ಪತ್ನಿಯಿಂದ 18 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಇವರಿಬ್ಬರು ಆಗಸ್ಟ್ 27, 1980 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ. ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಇದ್ದಾರೆ. ಈ ವೃದ್ಧರ ವೈವಾಹಿಕ ಸಂಬಂಧವು ಕ್ರಮೇಣ ಹದಗೆಟ್ಟಿತು ಮತ್ತು ಅವರು ಮೇ 8, 2006 ರಿಂದಲೇ ಬೇರೆ ಬೇರೆಯಾಗಿ ವಾಸಿಸುತ್ತಿದ್ದರು.
ಕರ್ನಾಲ್ ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯಲ್ಲಿ, ಪತಿಯು ತನಗೆ ಪತ್ನಿಯಿಂದ ಮಾನಸಿಕ ಕ್ರೌರ್ಯ ಆಗುತ್ತಿದೆ ಎಂದು ಆರೋಪಿಸಿದ್ದರು. ಆದರೆ, ನ್ಯಾಯಾಲಯವು ಜನವರಿ 2013 ರಲ್ಲಿ ಇವರ ವಿಚ್ಛೇದನದ ಮನವಿಯನ್ನು ತಿರಸ್ಕರಿಸಿತ್ತು. ನಂತರ ಈ ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿತ್ತು. ಅಲ್ಲಿ ನವೆಂಬರ್ 4, 2024 ರಂದು ಕೋರ್ಟ್ ಮಧ್ಯಸ್ಥಿಕೆಯಲ್ಲಿ ವಿಚಾರಣೆಗಳು ಪ್ರಾರಂಭವಾದವು. ಈ ಅವಧಿಯಲ್ಲಿ ಎರಡೂ ಕಡೆಯ ಕಕ್ಷಿದಾರರು ಮತ್ತು ಅವರ ಮಕ್ಕಳು ರೂ. 3.7 ಕೋಟಿ ಜೀವನಾಂಶ ಇತ್ಯರ್ಥದ ಷರತ್ತಿನ ಮೇಲೆ ವಿಚ್ಛೇದನಕ್ಕೆ ಒಪ್ಪಿಕೊಂಡರು.

ಪರಿಹಾರ ನೀಡಲು ಪತಿ ಕೃಷಿ ಭೂಮಿಯನ್ನು ಮಾರಾಟ ಮಾಡಿದ್ದು, 2.16 ಕೋಟಿ ರೂಪಾಯಿಯನ್ನು ಡಿಡಿ ಮೂಲಕ ಮತ್ತು ಹೆಚ್ಚುವರಿಯಾಗಿ 50 ಲಕ್ಷ ರೂಪಾಯಿ ನಗದನ್ನು ಕಬ್ಬು ಮತ್ತು ಇತರ ಬೆಳೆಗಳಿಂದ ಬರುವ ಆದಾಯದಿಂದ ಕೊಡುವುದಾಗಿ ಅಜ್ಜ ಹೇಳಿದ್ದಾರೆ. ಅಲ್ಲದೆ ಗಂಡನ ಮರಣದ ನಂತರ ಅವರ ಆಸ್ತಿಯ ಮೇಲಿನ ಎಲ್ಲಾ ಹಕ್ಕುಗಳನ್ನು ಹೆಂಡತಿ ಮತ್ತು ಮಕ್ಕಳಿಗೆ ಬಿಟ್ಟುಕೊಡಬೇಕೆಂಬ ಒಪ್ಪಂದದ ಷರತ್ತನ್ನು ನ್ಯಾಯಾಲಯ ವಿಧಿಸಿದೆ.

ನ್ಯಾಯಮೂರ್ತಿ ಸುಧೀರ್ ಸಿಂಗ್ ಮತ್ತು ನ್ಯಾಯಮೂರ್ತಿ ಜಗಜಿತ್ ಸಿಂಗ್ ಬೇಡಿ ಅವರ ಹೈಕೋರ್ಟ್ ಪೀಠವು ಒಪ್ಪಂದವನ್ನು ಅಂಗೀಕರಿಸುವ ಮೂಲಕ ವೃದ್ಧ ಜೋಡಿಯ ವಿಚ್ಛೇದನಕ್ಕೆ ಅಧಿಕೃತ ಮುದ್ರೆ ಒತ್ತಿದೆ.

Shivarajkumar: ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುವ ಮುನ್ನ ಶಿವಣ್ಣ ಭಾವುಕ

vijay mallya: ವಿಜಯ್ ಮಲ್ಯ, ನೀರವ್ ಮೋದಿಯ 15,000 ಕೋಟಿ ಆಸ್ತಿ ಬ್ಯಾಂಕ್‌ಗಳಿಗೆ ಜಮಾ

Diabetes ಮಧುಮೇಹಿಗಳೇ ಈ ಟೀ ಕುಡಿಯಿರಿ, ಆರಾಮಾಗಿರಿ

Health tips ರಾತ್ರಿ ನಿದ್ದೆ ಬರುತ್ತಿಲ್ಲವೇ? ಮಲಗುವ 2 ಗಂಟೆ ಮೊದಲು ಈ ಜ್ಯೂಸ್ ಕುಡಿದ್ರೆ ಸಾಕು!

TAGGED:The elderly couple who got divorced after 43 years of marriagethe husband agreed to pay 3.7 crore compensation!
Share This Article
Facebook Twitter Copy Link Print
Previous Article vijay mallya: ವಿಜಯ್ ಮಲ್ಯ, ನೀರವ್ ಮೋದಿಯ 15,000 ಕೋಟಿ ಆಸ್ತಿ ಬ್ಯಾಂಕ್‌ಗಳಿಗೆ ಜಮಾ
Next Article Not a single child 95 ವರ್ಷಗಳಿಂದ ಈ ದೇಶದಲ್ಲಿ ಒಂದೇ ಒಂದು ಮಗುವೂ ಜನಿಸಿಲ್ಲ! ಯಾಕೆ ಹೀಗೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?