newsics.com
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಅವರಿಗೆ ನ್ಯಾಯಾಲಯದಿಂದ ಪೂರ್ಣ ಜಾಮೀನು ದೊರೆತಿದೆ. ಆದರೆ, ಪೊಲೀಸರು ಈ ಜಾಮೀನು ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಯೋಜನೆ ಹೊಂದಿದ್ದಾರೆ. ದರ್ಶನ್ ಅವರು ಅನಾರೋಗ್ಯದ ನೆಪದಲ್ಲಿ ಮಧ್ಯಂತರ ಜಾಮೀನು ಪಡೆದಿದ್ದರು ಮತ್ತು ಸರ್ಜರಿ ಮಾಡಿಸಿಕೊಂಡಿಲ್ಲ ಎಂಬುದನ್ನು ಪೊಲೀಸರು ಪ್ರಮುಖವಾಗಿ ಪ್ರಸ್ತಾಪಿಸಲಿದ್ದಾರೆ.
ಹೌದು, ಇಷ್ಟು ದಿನಗಳ ಕಾಲ ಜೈಲು ಹಾಗೂ ಆಸ್ಪತ್ರೆಯಲ್ಲಿ ಕಾಲ ಕಳೆದು ಸುಸ್ತಾಗಿದ್ದ ದರ್ಶನ್ ಈಗ ಮನೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ಈ ಮಧ್ಯೆ ದರ್ಶನ್ ಹಾಗೂ ಅವರ ಗ್ಯಾಂಗ್ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ಬೆಂಗಳೂರು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.
ದರ್ಶನ್ ಕೇಸ್ನಲ್ಲಿ ಎರಡು ವಿಚಾರಗಳನ್ನು ಹೈಲೈಟ್ ಮಾಡಲು ಪೊಲೀಸರು ಚಿಂತನೆ ನಡೆಸಿದ್ದಾರೆ. ಅನಾರೋಗ್ಯದ ಕಾರಣ ಕೊಟ್ಟು ದರ್ಶನ್ ಮಧ್ಯಂತರ ಜಾಮೀನು ಪಡೆದಿದ್ದರು. ಸರ್ಜರಿ ಅಗತ್ಯ ಇದೆ ಎಂದು ಹೇಳಲಾಗಿತ್ತು. ಆದರೆ, ಯಾವುದೇ ಸರ್ಜರಿ ನಡೆಸಿಲ್ಲ. ಈ ವಿಚಾರವನ್ನು ಸುಪ್ರೀಂನಲ್ಲಿ ಹೈಲೈಟ್ ಮಾಡಲು ಚಿಂತನೆ ನಡೆಸಲಾಗಿದೆ. ಈಗ ಮೆರಿಟ್ ಆಫ್ ಕೇಸ್ ಮೇಲೆ ರೆಗ್ಯುಲರ್ ಬೇಲ್ ಕೂಡ ಮಂಜೂರಾಗಿದೆ. ಈ ಎರಡು ವಿಚಾರ ಮುಂದಿಟ್ಟುಕೊಂಡು ಸುಪ್ರೀಂ ಮೊರೆ ಹೋಗಲು ನಿರ್ಧಾರ ಮಾಡಲಾಗಿದೆ.
ಸದ್ಯ ಪೊಲೀಸ್ ಇಲಾಖೆ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ. ಇದಕ್ಕೆ ರಾಜ್ಯ ಗೃಹ ಇಲಾಖೆಯ ಒಪ್ಪಿಗೆಯ ಅಗತ್ಯವಿದೆ. ಹೀಗಾಗಿ, ಗೃಹ ಇಲಾಖೆಯಿಂದ ಒಪ್ಪಿಗೆ ಪಡೆದು ಪೊಲೀಸರು ಕೋರ್ಟ್ ಮೊರೆ ಹೋಗಲಿದ್ದಾರೆ.