newsics.com
ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅನ್ನು ಹೈಕೋರ್ಟ್ ಬಿಡುಗಡೆ ಮಾಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ರವಿ ಬಿಡುಗಡೆಗೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಆದರೆ, ನಾಳೆ ಬೆಳಗಾವಿಯಲ್ಲಿ ಸಚಿವೆ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಎಂಎಲ್ಸಿ ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶಿಸಿದ ಹಿನ್ನೆಲೆ ಬೆಳಗಾವಿಯಲ್ಲಿ ನಾಳೆ ಬೆಳಗ್ಗೆ 11ಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸಿಪಿಎಡ್ ಮೈದಾನದಿಂದ ಡಿಸಿ ಕಚೇರಿವರೆಗೂ ಮೆರವಣಿಗೆ ನಡೆಯಲಿದೆ. ಅಲ್ಲದೇ ಎಂಎಲ್ಸಿ ಸ್ಥಾನದಿಂದ ಸಿ.ಟಿ.ರವಿ ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.
ಇನ್ನು ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ಹಿನ್ನೆಲೆ ಎಲ್ಲೆಡೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯ ಸಿ.ಟಿ.ರವಿ ಮನೆ ಮುಂದೆ ಕಾರ್ಯಕರ್ತರಿಂದ ಸಂಭ್ರಮಸಲಾಗಿದ್ದು, ಸಿ.ಟಿ.ರವಿ ಸೋದರಿ ಮತ್ತು ಮಗ ಭಾಗಿ ಆಗಿದ್ದಾರೆ.