newsics.com
ಬೆಂಗಳೂರು: ವಿವಿಧ ಕಾರ್ಯಕ್ರಮ ಹಾಗೂ ಯೋಜನೆಗಳ ಮೂಲಕ
ಹಿಂದೂ ಧರ್ಮ ಮತ್ತು ದೇವಾಲಯಗಳ ರಕ್ಷಣೆಗೆ ಪಣ ತೊಟ್ಟಿರುವ ಸಚಿವ ರಾಮಲಿಂಗಾರೆಡ್ಡಿಯವರ ಕ್ರಮ ಆಸ್ತಿಕ ಸಮುದಾಯದಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಅರ್ಚಕ ಸಮುದಾಯ ಹೇಳಿದೆ.
ಕೆಲ ಸಂಸ್ಥೆಗಳು, ಟ್ರಸ್ಟ್ ಗಳು ಹಾಗೂ ಖಾಸಗಿ ವ್ಯಕ್ತಿಗಳು ರಾಜ್ಯದ ಮುಜರಾಯಿ ದೇವಸ್ಥಾನದ ವ್ಯಾಪ್ತಿಯಲ್ಲಿ ಬರುವ ಸಾವಿರಾರು ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಸಚಿವ ರಾಮಲಿಂಗಾ ರೆಡ್ಡಿ ಅವರ ಬದ್ಧತೆಯಿಂದ ಈವರೆಗೆ ರಾಜ್ಯದ ವಿವಿಧ ದೇವಸ್ಥಾನಗಳ 10,700 ಎಕರೆ ಜಮೀನನ್ನು ರಕ್ಷಣೆ ಮಾಡಲಾಗಿದೆ. ಒಟ್ಟು 5022 ಆಸ್ತಿಗಳಿಗೆ ಕಂದಾಯ ಇಲಾಖೆಯಿಂದ ಸೂಕ್ತ ದಾಖಲೆಗಳನ್ನು ಸೃಷ್ಟಿಸಿ, ದೇವಸ್ಥಾನಗಳ ಅಧೀನಕ್ಕೆ ನೀಡಲಾಗಿದೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.
ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ 34,564 ದೇವಸ್ಥಾನಗಳ ಪೈಕಿ ಬಹುತೇಕ ದೇವಸ್ಥಾನಗಳಿಗೆ ಸರಕಾರ ಮತ್ತು ದಾನಿಗಳು ನೀಡಿದ ಆಸ್ತಿಯಿದೆ. ಆದರೆ, ಬಹುತೇಕ ದೇವಸ್ಥಾನಗಳ ಆಸ್ತಿ ಖಾಸಗಿ ಪಾಲಾಗಿತ್ತು. ಇದೀಗ ಸರ್ವೆ ನಡೆಸಿ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ಆಸ್ತಿಗಳನ್ನು ಮರು ವಶಪಡಿಸಿಕೊಳ್ಳಲಾಗಿದೆ.
ರಾಜ್ಯದಲ್ಲಿ 34,166 ಸಿ ದರ್ಜೆಯ ದೇವಸ್ಥಾನಗಳು, 193 ಬಿ ದರ್ಜೆಯ ದೇವಸ್ಥಾನ ಹಾಗೂ 205 ‘ಎ’ ದರ್ಜೆಯ ದೇವಸ್ಥಾನಗಳಿವೆ. ಈ ದೇವಸ್ಥಾನಗಳಿಗೆ ಸರ್ಕಾರದಿಂದ ಹಾಗೂ ದಾನಿಗಳಿಂದ ದಾನದ ರೂಪದಲ್ಲಿ ಬಂದ ಸಾವಿರಾರು ಎಕರೆ ಆಸ್ತಿಯಿದ್ದರೂ ಸೂಕ್ತ ದಾಖಲೆಗಳಿರಲಿಲ್ಲ. ಇದೀಗ ಕಂದಾಯ ಇಲಾಖೆ ಎಲ್ಲ ಆಸ್ತಿಗಳಿಗೆ ದಾಖಲೆ ಒದಗಿಸುವ ಕೆಲಸ ಮಾಡಿದೆ.
ರಾಜ್ಯದಲ್ಲಿ ಮುಜರಾಯಿ ಆಸ್ತಿಗಳ ಸಂರಕ್ಷಣೆಯನ್ನು ಅಭಿಯಾನ ಮಾದರಿಯಲ್ಲಿ ಕೈಗೊಂಡ ಪರಿಣಾಮ ವರ್ಷದಲ್ಲಿ 5022 ಆಸ್ತಿಗಳನ್ನು ಇಲಾಖೆಯ ವಶಕ್ಕೆ ಪಡೆಯಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ದೇವರು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಆ ಪಕ್ಷದಿಂದ ಮಾಡಲು ಆಗದ ಕೆಲಸವನ್ನು ನಾವು ಮಾಡಿದ್ದೇವೆ. ಧರ್ಮ ಬೇರೆ ರಾಜಕೀಯ ಬೇರೆ, ಧರ್ಮ ಭಾವನೆಗೆ ಸಂಬಂಧಿಸಿದ್ದು ಅದರೊಡನೆ ರಾಜಕೀಯ ಬೆರೆಸಿ, ಕಿಚ್ಚು ಹಚ್ಚಿಸುವ ಕೆಲಸವನ್ನು ಇನ್ನಾದರೂ ಬಿಜೆಪಿ ಅವರು ಬಿಡಬೇಕು ಎಂದು ರಾಮಲಿಂಗಾ ರೆಡ್ಡಿ ಆಗ್ರಹಿಸಿದರು.
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Karnataka Weather ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ
Varthur Prakash ಬೆಂಗಳೂರಿನಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆ ಅರೆಸ್ಟ್