newsics.com
ಮಂಡ್ಯ: ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಯಲಿದೆ. ಈ ಮೂಲಕ 66 ವರ್ಷಗಳ ಬಳಿಕ ನಾಲ್ಕನೇ ಬಾರಿ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ಜರುಗಲಿದೆ.
ಸಮ್ಮೇಳನದಲ್ಲಿ ಶನಿವಾರ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು.
ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನದ ಆತಿಥ್ಯಕ್ಕೆ ಕೋರಿಕೆ ಸಲ್ಲಿಸಿದ್ದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೇ ಸಮ್ಮೇಳನದ ಆತಿಥ್ಯ ನೀಡಲು ಎಲ್ಲಾ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.
ಸಮ್ಮೇಳನದ ಆತಿಥ್ಯ ವಹಿಸುವ ಜವಾಬ್ದಾರಿ ಬಳ್ಳಾರಿ ಜಿಲ್ಲೆಗೆ ಅವಿರೋಧವಾಗಿ ದೊರೆಯಿತು ಎಂದು ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿಷ್ಟಿ ರುದ್ರಪ್ಪ ತಿಳಿಸಿದರು.
ಬಳ್ಳಾರಿಗೆ 66 ವರ್ಷಗಳ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಆತಿಥ್ಯ ಲಭಿಸಿದ್ದು, 1926, 1938, 1958ರಲ್ಲಿ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು.
Mandya Sahitya Sammelana ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯ ಮಂಡಿಸಿದ ಸಮ್ಮೇಳನಾಧ್ಯಕ್ಷ ಗೊರುಚ
Iphone ದೇವಸ್ಥಾನದ ಹುಂಡಿಗೆ ಬಿತ್ತು ಐಫೋನ್! ಇದೆಲ್ಲ ದೇವರಿಗೆ ಸೇರಿದ್ದು ಎಂದ ದೇವಸ್ಥಾನ ಆಡಳಿತ ಮಂಡಳಿ
GST Council Meeting ‘ಪಾಪ್ ಕಾರ್ನ್ ಟ್ಯಾಕ್ಸ್’ ನಿರ್ಮಲಾ ಸೀತಾರಾಮನ್ ಹೇರಿದ ವಿಶೇಷ ಟ್ಯಾಕ್ಸ್
Relationship ಹುಡುಗಿಯರನ್ನು ಇಂಪ್ರೆಸ್ ಮಾಡಲು ಹುಡುಗರು ಹೇಳುವ ಮಾತುಗಳಿವು..!