newsics.com
ಫ್ಲೋರಿಡಾ(ಅಮೆರಿಕ): ಹಿರಿಯ ನಟ ಡಾ.ಶಿವರಾಜ್ ಕುಮಾರ್ ಅವರ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಅಮೆರಿಕದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಹಲವು ಗಂಟೆ ಕಾಲ ನಡೆದ ಈ ಶಸ್ತ್ರಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ಮಾಹಿತಿಯಿಂದ ಅಭಿಮಾನಿಗಳು ಮತ್ತು ಕುಟುಂಬಸ್ಥರು ಈ ಸುದ್ದಿಯಿಂದ ಸಂತೋಷಗೊಂಡಿದ್ದಾರೆ.
ಈ ಆಪರೇಷನ್ ಸತತ ನಾಲ್ಕರಿಂದ ಐದು ಗಂಟೆ ಕಾಲ ನಡೆಯಿತು ಮತ್ತು ಯಶಸ್ವಿಯಾಗಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
ಶಿವರಾಜ್ಕುಮಾರ್ ಮೊದಲಿನಿಂದಲೂ ಪಾಸಿಟಿವ್ ಆಗಿಯೇ ಯೋಚಿಸುತ್ತಾ ಬಂದವರು. ಅದೇ ರೀತಿ ಸರ್ಜರಿ ನಡೆಯುತ್ತದೆ ಎಂದಾಗ ಅದನ್ನೂ ಪಾಸಿಟಿವ್ ಆಗಿಯೇ ತೆಗೆದುಕೊಂಡರು. ಅಮೆರಿಕದಲ್ಲಿ ಇದೀಗ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಈ ವಿಚಾರ ತಿಳಿದು ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.
ಆಸ್ಪತ್ರೆಯಲ್ಲಿ ಶಿವಣ್ಣನೊಂದಿಗೆ ಪತ್ನಿ ಗೀತಾ, ಪುತ್ರಿ ನಿವೇದಿತಾ, ಬಾಮೈದ ಮಧು ಬಂಗಾರಪ್ಪ ಜತೆಗಿದ್ದಾರೆ.
ಶಿವರಾಜ್ ಕುಮಾರ್ ಅವರು ಶೀಘ್ರದಲ್ಲೇ ಚೇತರಿಸಿಕೊಂಡು ನಟನೆಗೆ ಮರಳುವ ನಿರೀಕ್ಷೆಯಿದೆ.
ಭಾರತೀಯ ಕಾಲಮಾನ ಮಂಗಳವಾರ (ಡಿಸೆಂಬರ್ 24) ಸಂಜೆ 6 ಗಂಟೆಗೆ (ಅಮೆರಿಕದ ಕಾಲ ಮಾನ ಬೆಳಗ್ಗೆ 8 ಗಂಟೆಗೆ) ಆಪರೇಷನ್ ಆರಂಭ ಆಯಿತು. 4-5 ಗಂಟೆಗಳ ಕಾಲ ಆಪರೇಷನ್ ನಡೆದಿದ್ದು ಅದು ಯಶಸ್ವಿಯಾಗಿದೆ ಎಂಬ ವಿಚಾರ ಗೊತ್ತಾಗಿದೆ.
ಶಿವರಾಜ್ ಕುಮಾರ್ ಅವರು ಬೇಗ ಚೇತರಿಕೆ ಕಾಣಲಿ ಎಂದು ಹೋಮ-ಹವನಗಳು ನಡೆದಿದ್ದವು. ಸಾಕಷ್ಟು ಕಡೆಗಳಲ್ಲಿ ಪೂಜೆ ಪುನಸ್ಕಾರ ಮಾಡಲಾಗಿತ್ತು. ಶಿವಣ್ಣನ ಅಭಿಮಾನಿಗಳು ದೇವರ ಮೊರೆಹೋಗಿದ್ದರು. ಈ ಎಲ್ಲ ಪೂಜೆ-ಪುನಸ್ಕಾರ, ಹೋಮ-ಹವನ ಹಾಗೂ ಅಭಿಮಾನಿಗಳ ಪ್ರಾರ್ಥನೆ ಫಲ ಕೊಟ್ಟಿದೆ.
ಶಿವರಾಜ್ ಕುಮಾರ್ ಅವರಿಗೆ ಕ್ಯಾನ್ಸರ್ ಇತ್ತು. ಇದಕ್ಕಾಗಿ ಅವರು ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಸರ್ಜರಿ ಮಾಡಿಸಿಕೊಂಡರು. ಡಾ. ಮುರುಗೇಶ್ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದೆ.
ಶಿವರಾಜ್ ಕುಮಾರ್ ಅವರು ಈಗ ನಟನೆಯಿಂದ ದೊಡ್ಡ ಬ್ರೇಕ್ ಪಡೆದಿದ್ದಾರೆ. ಅವರು ಸಿನಿಮಾ ಕೆಲಸಗಳಿಗೆ ಅಲ್ಪವಿರಾಮ ಹಾಕಿ ಆರೋಗ್ಯದ ಕಡೆ ಸಂಪೂರ್ಣ ಗಮನ ನೀಡಿದ್ದಾರೆ. ಹೋಂ ಬ್ಯಾನರ್ ನಲ್ಲಿ ಮೂಡಿ ಬಂದ ‘ಭೈರತಿ ರಣಗಲ್’ ಚಿತ್ರದ ಕೆಲಸಗಳನ್ನು ಪೂರ್ಣಗೊಳಿಸಿದ ಅವರು, ಇದರ ಪ್ರಚಾರದಲ್ಲಿ ಭಾಗಿ ಆದರು. ಅಲ್ಲಿಯವರೆಗೆ ಶಿವಣ್ಣನಿಗೆ ಅನಾರೋಗ್ಯ ಎಂಬುದಷ್ಟೇ ಸುದ್ದಿ ಇತ್ತು. ಪ್ರಚಾರದ ವೇಳೆ ಅವರು ಈ ವಿಚಾರ ಒಪ್ಪಿಕೊಂಡರು. ಸಂದರ್ಶನದ ಸಂದರ್ಭದಲ್ಲಿ ತಮಗೆ ಅನಾರೋಗ್ಯ ಉಂಟಾಗಿರೋದು ಸತ್ಯ ಎಂದರು. ಅಮೆರಿಕಕ್ಕೆ ಹೋಗುವುದಕ್ಕೂ ಮೊದಲು ತಮಗೆ ಕ್ಯಾನ್ಸರ್ ಎಂಬ ವಿಚಾರ ರಿವೀಲ್ ಮಾಡಿದರು.
ಈಗ ಅವರ ನಟನೆಯ ’45’ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಈ ಚಿತ್ರ 2025ರಲ್ಲಿ ತೆರೆಗೆ ಬರುವ ನಿರೀಕ್ಷೆ ಇದೆ. ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಇದೆ.
ವಿಲನ್ ಪಾತ್ರಕ್ಕೆ 200 ಕೋಟಿ ರೂ ಸಂಭಾವನೆ ಪಡೆದ ಕನ್ನಡದ ನಟ yash : ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಮೊದಲ ದಾಖಲೆ
Bigg Boss Kannada ಐಶಾರಾಮಿ ರೆಸಾರ್ಟ್ ಆಗಿ ಬದಲಾದ ಬಿಗ್ ಬಾಸ್ ಮನೆ; ದೊಡ್ಮನೆಯಲ್ಲಿ ಮತ್ತೊಮ್ಮೆ ಮಿತಿ ಮೀರಿದ ವರ್ತನೆ