newsics.com
ಮಧ್ಯಪ್ರದೇಶ: ಕೆನ್-ಬೇತ್ವಾನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಇಂದು ಮಧ್ಯಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.
ಕೆನ್-ಬೇತ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಯು ರಾಷ್ಟ್ರೀಯ ದೃಷ್ಟಿಕೋನ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳನ್ನು ಜೋಡಿಸುವ ಯೋಜನೆಯಾಗಿದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100 ನೇ ಜನ್ಮದಿನದ ಸಂದರ್ಭದಲ್ಲಿ ಕೆನ್-ಬೇತ್ವಾನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು
ಈ ಯೋಜನೆಯು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಿಗೆ ನೀರಾವರಿ ಸೌಲಭ್ಯಗಳನ್ನು ಒದಗಿಸುವುದು.