newsics.com
ಭಾರತದ 14 ಪ್ರಧಾನಮಂತ್ರಿ ಡಾ. ಮನಮೋಹನಸಿಂಗ್ ಅವರನ್ನು ಚಿಂತಕರು ಮತ್ತು ವಿದ್ವಾಂಸರಾಗಿದ್ದರು. ಮನಮೋಹನಸಿಂಗ್ ಅವರು 1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದರು. ಡಾ. ಸಿಂಗ್ ಅವರು ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು 1948ರಲ್ಲಿ ಪಂಜಾಬ್ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿದರು. ಬಳಿಕ ಅವರು ಇಂಗ್ಲೆಂಡ್ ನ ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ಮುಂದುವರೆಸಿದರು. ಅಲ್ಲಿ ಅವರು 1957ರಲ್ಲಿ ಪ್ರಥಮ ದರ್ಜೆಯೊಂದಿಗೆ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು.
ಶಿಕ್ಷಣ
1971ರಲ್ಲಿ ಡಾ. ಮನಮೋಹನ್ ಸಿಂಗ್ ಅವರು ವಾಣಿಜ್ಯ ಸಚಿವಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿ ಭಾರತ ಸರ್ಕಾರದ ಭಾಗವಾದರು. 1972ರಲ್ಲಿ ಇವರನ್ನು ಹಣಕಾಸು ಸಚಿವಾಲಯದ ಮುಖ್ಯ ಆರ್ಥಿಕ ಸಲಹೆಗಾರರಾಗಿ ನೇಮಕ ಮಾಡಲಾಯಿತು. ಡಾ. ಸಿಂಗ್ ಅವರು ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ಗೌರ್ನರ್ ಆಗಿ, ಪ್ರಧಾನಮಂತ್ರಿಗಳ ಸಲಹೆಗಾರರಾಗಿ, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷರಾಗಿ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಉನ್ನತ ಸ್ಥಾನವನ್ನು ಅವರು ಅಲಂಕರಿಸಿದ್ದರು. ಅಂತಿಮವಾಗಿ ಅವರು 2004 ರಿಂದ 2014ರವರೆಗೆ ಭಾರತದ 14ನೇ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಆರ್ಥಿಕ ಸುಧಾರಣೆ
1991ರಿಂದ 1996ರವರೆಗೆ ಡಾ. ಸಿಂಗ್ ಅವರು ಭಾರತದ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದರು. ಅವರು ಆಗ ಮಾಡಿದ ಆರ್ಥಿಕ ಸುಧಾರಣೆಗಳಿಗೆ ಈಗಲೂ ವಿಶ್ವದ ಮನ್ನಣೆ ಇದೆ. ಜನಪ್ರಿಯದೃಷ್ಟಿಕೋನದಿಂದ ನೋಡುವುದಾದರೆ ಭಾರತದ ಅಂದಿನ ದಿನಗಳು ಡಾ. ಸಿಂಗ್ ಅವರ ವ್ಯಕ್ತಿತ್ವವನ್ನು ಬಿಂಬಿಸುತ್ತವೆ.ಡಾ. ಸಿಂಗ್ ಅವರು ಸಾಮಾಜಿಕ ಕ್ಷೇತ್ರದ ತಮ್ಮ ಅದ್ವಿತೀಯ ಸಾಧನೆಗಾಗಿ ಹತ್ತು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಪ್ರಶಸ್ತಿಗಳು
ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮ ವಿಭೂಷಣ (1987) ಸೇರಿದೆ. ಜೊತೆಗೆ ವಿಜ್ಞಾನ ಕಾಂಗ್ರೆಸ್ ನ ಜವಾಹರಲಾಲ್ ನೆಹರೂ ಜನ್ಮ ಶತಮಾನೋತ್ಸವ ಪ್ರಶಸ್ತಿ (1995), ಹಣಕಾಸು ಸಚಿವರಿಗೆ ನೀಡುವ ಏಷ್ಯಾ ವಿತ್ತ ಪ್ರಶಸ್ತಿ (1993 ಮತ್ತು 1994) ಹಣಕಾಸು ಸಚಿವರಿಗೆ ನೀಡುವ ಯೂರೋ ಹಣ ಪ್ರಶಸ್ತಿ (1993), ಕೇಂಬ್ರಿಜ್ ವಿಶ್ವವಿದ್ಯಾಲಯದ ಆಡಮ್ ಸ್ಮಿತ್ ಬಹುಮಾನ (1956), ಕೇಂಬ್ರಿಜ್ ನ ಸೇಂಟ್ ಜಾನ್ ಕಾಲೇಜಿನಲ್ಲಿ ಅತ್ಯತ್ತುಮ ಸಾಧನೆಗಾಗಿ ರೈಟ್ಸ್ ಪ್ರಶಸ್ತಿ (1955) ಲಭಿಸಿದೆ.