newsics.com
ಹಾವೇರಿ : ಖಾಸಗಿ ಆಸ್ಪತ್ರೆಗೆ ಬಂದ ಮಹಿಳೆ ವೈದ್ಯರ ನಿರ್ಲಕ್ಷ್ಯಕ್ಕೆ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ರೊಚ್ಚಿಗೆದ್ದು ಪ್ರತಿಭಟನೆ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಸಮೀನಾ ಬಾನು (29) ಮೃತ ಮಹಿಳೆ. ಈಕೆ ಅಪೆಂಡಿಕ್ಸ್ ಇದೆ ಎಂದು ಬ್ಯಾಡಗಿ ಸರ್ಕಾರಿ ಆಸ್ಪತ್ರೆಯಿಂದ ನಗರದ ವೀರಾಪೂರ ಆಸ್ಪತ್ರೆಗೆ ದಾಖಲಾಗಿದ್ದರು.
ವೈದ್ಯರು ಪರೀಕ್ಷೆ ಮಾಡದೆ ಇಂಜೆಕ್ಷನ್ ಮಾಡಿದ್ದೇ ಸಮೀನಾ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಹಿಳೆ ಬೇಡ ಎಂದರೂ ಇಂಜೆಕ್ಷನ್ ಮಾಡಿದ್ದು ನಮ್ಮ ಮಗಳ ಸಾವಿಗೆ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರೇ ಕಾರಣ.
ಸಂಬಂಧಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಪೋಲಿಸರು ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.