Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Death sentence ಮೂವರು ಮಕ್ಕಳನ್ನು ಹತ್ಯೆಗೈದು ಪತ್ನಿಯನ್ನು ಬಾವಿಗೆ ತಳ್ಳಿದ್ದ ಪತಿಗೆ ಗಲ್ಲು ಶಿಕ್ಷೆ ವಿಧಿಸಿದ ಮಂಗಳೂರು‌ ಕೋರ್ಟ್
ಕರ್ನಾಟಕಪ್ರಮುಖ

Death sentence ಮೂವರು ಮಕ್ಕಳನ್ನು ಹತ್ಯೆಗೈದು ಪತ್ನಿಯನ್ನು ಬಾವಿಗೆ ತಳ್ಳಿದ್ದ ಪತಿಗೆ ಗಲ್ಲು ಶಿಕ್ಷೆ ವಿಧಿಸಿದ ಮಂಗಳೂರು‌ ಕೋರ್ಟ್

Share
2 Min Read
SHARE

newsics.com

ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆಗೈದು ಬಳಿಕ ಪತ್ನಿಯ ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ.

ಮುಲ್ಕಿ ಬಳಿಯ ತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ಅಲಿಯಾಸ್ ಹಿತೇಶ್ ಕುಮಾರ್ (43) ಮರಣದಂಡನೆಗೊಳಗಾಗಿರುವ ಅಪರಾಧಿ.
ತಾಳಿಪಾಡಿಯ ಪದ್ಮನೂರು ಶೆಟ್ಟಿಕಾಡಿನಲ್ಲಿ 2022 ಜೂನ್ 23ರಂದು ಸಂಜೆ ಆರೋಪಿಯು ತನ್ನ 14, 11 ಮತ್ತು 4 ವರ್ಷದ ಮಕ್ಕಳನ್ನು ಮನೆಯ ಬಳಿ ಇರುವ ಬಾವಿಗೆ ತಳ್ಳಿ ಕೊಲೆ ಮಾಡಿದ್ದ. ಅಲ್ಲದೆ, ಕೆಲಸದಿಂದ ಮನೆಗೆ ಬಂದು ಮಕ್ಕಳನ್ನು ಹುಡುಕುತ್ತಿದ್ದ ಹೆಂಡತಿ ಲಕ್ಷ್ಮೀಯನ್ನು ಕೂಡ ಅದೇ ಬಾವಿಗೆ ತಳ್ಳಿ ಕೊಲ್ಲಲು ಯತ್ನಿಸಿದ್ದ.

ಯಾವುದೇ ಕೆಲಸಕ್ಕೆ ಹೋಗದ ಹಿತೇಶ್ ಹೆಂಡತಿ, ಮಕ್ಕಳನ್ನು ಸಾಕಲು ಕಷ್ಟವಾಗುತ್ತದೆ ಎಂದು ಈ ಕೃತ್ಯ ಎಸಗಿದ್ದ. ಹೆಂಡತಿ ಮಕ್ಕಳನ್ನು ಸಾಯಿಸಿದ್ದಲ್ಲಿ ತಾನು ಹೇಗೆ ಬೇಕಾದರೂ ಜೀವಿಸಬಹುದೆಂದು ಯೋಚಿಸಿ ಈ ಕೃತ್ಯ ಎಸಗಿದ್ದ‌ ಎಂದು ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ದಾಖಲಿಸಿದ್ದರು.

ಬಾವಿಗೆ ಬಿದ್ದ ಮಕ್ಕಳು ಬಾವಿಯೊಳಗಿನ ಹಗ್ಗದಲ್ಲಿ ನೇತಾಡುವುದನ್ನು ನೋಡಿದ ಆರೋಪಿ ತಂದೆ ಹಗ್ಗವನ್ನು ತುಂಡರಿಸಿದ್ದ. ಹೆಂಡತಿಯನ್ನು ಬಾವಿಗೆ ದೂಡುವ ವೇಳೆ ಪತ್ನಿ ಈತನ ಕೈಯನ್ನು ಗಟ್ಟಿ ಹಿಡಿದ ಪರಿಣಾಮ ಈತನೂ ಬಾವಿಗೆ ಬಿದ್ದಿದ್ದ. ಬಳಿಕ ನೆರೆಹೊರೆಯವರು ಬಂದು ಇಬ್ಬರನ್ನೂ ಬಾವಿಯಿಂದ ಮೇಲಕ್ಕೆತ್ತಿದ್ದರು.
ಆರೋಪಿಯ ವಿರುದ್ಧ ಮಂಗಳೂರು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮುಲ್ಕಿ ಪೊಲೀಸ್ ಠಾಣೆಯ ನಿರೀಕ್ಷಕ ಕುಸುಮಾಧರ್ ಕೆ. ಅವರು ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ಕಲಂ 302, 307 ಐಪಿಸಿ ಅಡಿಯಲ್ಲಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ, ತಪ್ಪಿತಸ್ಥನಿಗೆ ಭಾರತೀಯ ದಂಡ ಸಂಹಿತೆ ಕಲಂ 302 ರಡಿ ಅಪರಾಧಕ್ಕೆ ಮರಣದಂಡನೆ/ಗಲ್ಲು ಶಿಕ್ಷೆ ಮತ್ತು ಭಾರತೀಯ ದಂಡ ಸಂಹಿತೆ ಕಲಂ 307ರ ಅಡಿಯ ಅಪರಾಧಕ್ಕೆ 10 ವರ್ಷಗಳ ಕಾರಾಗೃಹವಾಸದ ಶಿಕ್ಷೆ ವಿಧಿಸಿದ್ದಾರೆ.

ಮರಣದಂಡನೆಯನ್ನು ಹೈಕೋರ್ಟ್ ಅನುಮೋದಿಸುವವರೆಗೆ ಜಾರಿಗೊಳಿಸದಂತೆ ಜೈಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ನೊಂದ ಮೃತ ತಾಯಿಯಾದ ಲಕ್ಷ್ಮೀ ಅವರಿಗೆ ಸೂಕ್ತ ಪರಿಹಾರವನ್ನು ಕಾನೂನು ಸೇವೆಗಳ ಪ್ರಾಧಿಕಾರವು ನೀಡಬೇಕೆಂದು ನ್ಯಾಯಾಲಯವು ಆದೇಶಿಸಿದೆ.

Fire rain ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಕಿ ಮಳೆ: ವಾಹನ ಸವಾರರು ಕಂಗಾಲು, ವಿಡಿಯೋ ನೋಡಿ

Health Tips ನಿಮ್ಮ ಕಾಲಿನ ಆಕಾರವು ಏನು ಹೇಳುತ್ತದೆ? – ಈ ರೀತಿ ಇರೊವರು ಗುಣವಂತರು

Health Tips ಬೆಳಗ್ಗೆ ತುಪ್ಪ ಸೇವನೆ ಏಕೆ ಮಾಡಬೇಕು? ಪ್ರತಿನಿತ್ಯ ಸೇವಿಸಿದರೆ ಏನೆಲ್ಲಾ ಲಾಭ?

TAGGED:The court sentenced the father who killed three children to death
Share This Article
Facebook Twitter Copy Link Print
Previous Article ಡಿಕೆಶಿ ಬೆನ್ನಲ್ಲೇ ಹೊಸ ವರ್ಷ ಸಂಭ್ರಮಾಚರಣೆಗೆ ವಿದೇಶಕ್ಕೆ ಹಾರಿದ ಬಿಎಸ್ ವೈ: ಗೋವಾಕ್ಕೆ ತೆರಳಿದ ಹೆಚ್.ಡಿ.ಕೆ
Next Article Maternal mortality ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ, ಮಗು ಸಾವು

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?