newsics.com
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಸಿಟಿ. ರವಿ ಅವರ ಬಂಧನದ ಸಂದರ್ಭದಲ್ಲಿ ಪೊಲೀಸ್ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ ಡಿಸಿಎಂ ಡಿಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅವರ ಪಿಎಗಳು ಹಾಗೂ ಹಿರೇಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರು ಕೂಡ ಉಲ್ಲೇಖಿಸಿದ್ದಾರೆ.
13 ಪುಟಗಳ ದೂರಿನಲ್ಲಿ ಡಿಸಿಎಂ, ಸಚಿವರು, ಹಾಗೂ ಹಲವಾರು ಪೊಲೀಸ್ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿದೆ.
ರಾಜ್ಯಪಾಲರಿಗೆ, ಡಿಐಜಿ ಅಲೋಕ್ ಮೋಹನ್ ಅವರಿಗೆ ಸಿಟಿ ರವಿ ದೂರು ನೀಡಿದ್ದು, ನನ್ನ ಕೊಟ್ಟ ಕೇಸ್ ಎಫ್ಐಆರ್ ಆಗಿಲ್ಲ ಅಂತಾ ಕಿಡಿಕಾರಿದ್ದಾರೆ. ಪ್ರಕರಣದಲ್ಲಿ ಸಿಐಡಿಗೆ ಅತಿದೊಡ್ಡ ಸವಾಲ್ ಅಂದರೆ ಪರಿಷತ್ನಲ್ಲಿ ಮಹಜರು ನಡೆಸುವುದು. ಈ ಸಂಬಂಧ ಈಗಾಗಲೇ ಸಭಾಪತಿಗಳಿಗೆ ಪತ್ರ ಬರೆದು ಮಹಜರಿಗೆ ಅನುಮತಿ ಕೇಳಿದ್ದಾರೆ.