newsics.com
ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪತಿ ಅನೂಪ್ ಕುಮಾರ್, ಪತ್ನಿ ರಾಖಿ, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.
ಐದು ವರ್ಷದ ಹೆಣ್ಣು ಮಗು, 2 ವರ್ಷದ ಗಂಡು ಮಗುವಿಗೆ ವಿಷವುಣಿಸಿ ನಂತರ ಗಂಡ- ಹೆಂಡತಿ ನೇಣಿಗೆ ಶರಣಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
ಬೆಂಗಳೂರಲ್ಲೂ ಚೀನಾದ ಹೊಸ ವೈರಸ್ HMPV ಪತ್ತೆ, ಭಾರೀ ಅತಂಕ, ತುರ್ತು ಸಭೆ ಕರೆದ ಸಚಿವ, ಮಾರ್ಗಸೂಚಿ ಪ್ರಕಟ ಸಾಧ್ಯತೆ