newsics.com
ಬೆಂಗಳೂರು: ಆನೇಕಲ್ನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಸಿಲಿಂಡರ್ ಸ್ಫೋಟಕ್ಕೆ ಮನೆ ಛಿದ್ರ ಛಿದ್ರವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.
ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಛಿದ್ರ ಛಿದ್ರವಾಗಿವೆ. ಮನೆಯ ಪಕ್ಕದಲ್ಲಿದ್ದ ಹಲವು ಬೈಕ್ಗಳೂ ಜಖಂಗೊಂಡಿವೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಲ್ಲೂ ಚೀನಾದ ಹೊಸ ವೈರಸ್ HMPV ಪತ್ತೆ, ಭಾರೀ ಅತಂಕ, ತುರ್ತು ಸಭೆ ಕರೆದ ಸಚಿವ, ಮಾರ್ಗಸೂಚಿ ಪ್ರಕಟ ಸಾಧ್ಯತೆ